ಮಂಗಳೂರು: ಗ್ಯಾಸ್ ಟ್ಯಾಂಕರ್ ಮತ್ತು ಇಕೋ ಕಾರಿನ ನಡುವಿನ ಅಪಘಾತದಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಟ್ವಾಳ ತಾಲ್ಲೂಕಿನ ಮೆಲ್ಕಾರ್ ಪಾಣೆಮಂಗಳೂರು ಬಳಿಮಂಗಳವಾರ ಈ ಅಪಘಾತ ನಡೆದಿದೆ.
ಮೂಲ್ಕಿ ಸಮೀಪದ ಕಿನ್ನಿಗೋಳಿ ಐಕಳ ನಿವಾಸಿಗಳು ಸುಳ್ಯ ನಿಂತಿಕಲ್ಲು ಎಂಬಲ್ಲಿ ಕೊರಗಜ್ಜ ದೈವದ ನರ್ತನ ಸೇವೆಗೆ ಡೋಲು ಬಾರಿಸುವ ಸೇವೆ ಸಲ್ಲಿಸಿದ ಬಳಿಕ ಬೆಳಿಗ್ಗೆ ಹಿಂತಿರುಗುತ್ತಿದ್ದರು.
ಪಾಣೆಮಂಗಳೂರು ಸಮೀಪಿಸುತ್ತಿದ್ದಂತೆ ಎದುರಿನಿಂದ ಬಂದ ಗ್ಯಾಸ್ ಟ್ಯಾಂಕರ್ಗೆ ಕಾರು ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಘುನಾಥ,ಶೇಖರ ಐಕಳ, ಮುದರ, ರಾಜೇಶ್, ಸಂದೀಪ್ ಗೋಪಾಲಅವರಿಗೆ ಗಂಭೀರ ಗಾಯವಾಗಿದೆ.