<p><strong>ಮಂಗಳೂರು:</strong> ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ), ಇನ್ಸ್ಟಿಟ್ಯೂಟ್ ಆಫ್ ಸೆಕ್ರೆಟರಿಯೇಟ್ ಟ್ರೇನಿಂಗ್ ಮ್ಯಾನೇಜ್ಮೆಂಟ್ ದೆಹಲಿ ಮತ್ತು ಶಕ್ತಿ ವಿದ್ಯಾ ಸಂಸ್ಥೆ ಸಹಯೋಗದಲ್ಲಿ ಸಂಪನ್ಮೂಲ ವ್ಯಕ್ತಿಗಳ ತರಬೇತಿ ಕಾರ್ಯಾಗಾರ ನಡೆಯಿತು.</p>.<p>ಇಲ್ಲಿಯ ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ವಿವಿಧ ಜಿಲ್ಲೆಗಳಿಂದ 55ಕ್ಕೂ ಹೆಚ್ಚು ಶಿಕ್ಷಕರು, ಪ್ರಾಂಶುಪಾಲರು ಭಾಗವಹಿಸಿದ್ದರು.</p>.<p>ಕಾರ್ಯಾಗಾರ ಉದ್ಘಾಟಿಸಿದ ಇನ್ಸ್ಟಿಟ್ಯೂಟ್ ಆಫ್ ಸೆಕ್ರೆಟರಿಯೇಟ್ ಟ್ರೇನಿಂಗ್ ಮ್ಯಾನೇಜ್ಮೆಂಟ್ನ ಉಪ ನಿರ್ದೇಶಕ ಪುನೀತ್ ಕುಮಾರ್ ಶರ್ಮ, ಶಿಕ್ಷಕರು, ಮಾರ್ಗದರ್ಶಕರು ಭವಿಷ್ಯದಲ್ಲಿ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಿ, ಸದೃಢ ದೇಶವನ್ನು ಕಟ್ಟಲು ನೆರವಾಗಬೇಕು. ಮಕ್ಕಳಿಲ್ಲಿರುವ ಭಯ ಮತ್ತು ಕೀಳರಿಮೆಯನ್ನು ಹೋಗಲಾಡಿಸಬೇಕು ಎಂದರು.</p>.<p>ಸಿಬಿಎಸ್ಇ ಜಿಲ್ಲಾ ತರಬೇತಿ ಸಂಘಟಕ ಸುರೇಶ್, ಶಕ್ತಿ ಸಂಸ್ಥೆಯ ಸಂಸ್ಥಾಪಕ ಕೆ.ಸಿ ನಾಯಕ್, ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ, ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಎಚ್. ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ), ಇನ್ಸ್ಟಿಟ್ಯೂಟ್ ಆಫ್ ಸೆಕ್ರೆಟರಿಯೇಟ್ ಟ್ರೇನಿಂಗ್ ಮ್ಯಾನೇಜ್ಮೆಂಟ್ ದೆಹಲಿ ಮತ್ತು ಶಕ್ತಿ ವಿದ್ಯಾ ಸಂಸ್ಥೆ ಸಹಯೋಗದಲ್ಲಿ ಸಂಪನ್ಮೂಲ ವ್ಯಕ್ತಿಗಳ ತರಬೇತಿ ಕಾರ್ಯಾಗಾರ ನಡೆಯಿತು.</p>.<p>ಇಲ್ಲಿಯ ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ವಿವಿಧ ಜಿಲ್ಲೆಗಳಿಂದ 55ಕ್ಕೂ ಹೆಚ್ಚು ಶಿಕ್ಷಕರು, ಪ್ರಾಂಶುಪಾಲರು ಭಾಗವಹಿಸಿದ್ದರು.</p>.<p>ಕಾರ್ಯಾಗಾರ ಉದ್ಘಾಟಿಸಿದ ಇನ್ಸ್ಟಿಟ್ಯೂಟ್ ಆಫ್ ಸೆಕ್ರೆಟರಿಯೇಟ್ ಟ್ರೇನಿಂಗ್ ಮ್ಯಾನೇಜ್ಮೆಂಟ್ನ ಉಪ ನಿರ್ದೇಶಕ ಪುನೀತ್ ಕುಮಾರ್ ಶರ್ಮ, ಶಿಕ್ಷಕರು, ಮಾರ್ಗದರ್ಶಕರು ಭವಿಷ್ಯದಲ್ಲಿ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಿ, ಸದೃಢ ದೇಶವನ್ನು ಕಟ್ಟಲು ನೆರವಾಗಬೇಕು. ಮಕ್ಕಳಿಲ್ಲಿರುವ ಭಯ ಮತ್ತು ಕೀಳರಿಮೆಯನ್ನು ಹೋಗಲಾಡಿಸಬೇಕು ಎಂದರು.</p>.<p>ಸಿಬಿಎಸ್ಇ ಜಿಲ್ಲಾ ತರಬೇತಿ ಸಂಘಟಕ ಸುರೇಶ್, ಶಕ್ತಿ ಸಂಸ್ಥೆಯ ಸಂಸ್ಥಾಪಕ ಕೆ.ಸಿ ನಾಯಕ್, ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ, ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಎಚ್. ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>