<p><strong>ಮಂಗಳೂರು</strong>: ‘ನಮ್ಮೊಳಗಿನ ಮಾನವೀಯತೆಯ ಕರೆಗೆ ಓಗೊಟ್ಟು ಪ್ರೋತ್ಸಾಹ, ಒತ್ತಡಗಳಿಲ್ಲದೇ ಸಹಾಯ ಮಾಡುವ ಅದ್ಭುತ ಪ್ರವೃತ್ತಿಯೇ ಸ್ವಯಂಸೇವೆ. ಇದರ ಅಗತ್ಯ ಹಿಂದೆಂದಿಗಿಂತಲೂ ಈಗ ಹೆಚ್ಚಿದೆ’ ಎಂದು ಜಿಲ್ಲಾ ಭಾರತೀಯ ರೆಡ್ಕ್ರಾಸ್ ಸೊಸೈಟಿಯ ಯುವ ರೆಡ್ಕ್ರಾಸ್ ಸಂಯೋಜಕ ಸಚೇತ್ ಸುವರ್ಣ ಅಭಿಪ್ರಾಯಪಟ್ಟರು.</p>.<p>ಮಂಗಳೂರು ವಿಶವ್ವಿದ್ಯಾಲಯ ಮತ್ತು ವಿಶ್ವವಿದ್ಯಾಲಯ ಕಾಲೇಜಿನ ಯುವ ರೆಡ್ಕ್ರಾಸ್ ಘಟಕಗಳ ಆಶ್ರಯದಲ್ಲಿ ಬುಧವಾರ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ರೆಡ್ಕ್ರಾಸ್ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪರಿಚಯ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.</p>.<p>‘ಹೆನ್ರಿ ಡ್ಯುನಂಟ್ ಸ್ಥಾಪಿಸಿದ ಅಂತರರಾಷ್ಟ್ರೀಯ ಸಂಘಟನೆ ರೆಡ್ಕ್ರಾಸ್ಗೆ 100 ವರ್ಷ ಸಂದ ಈ ಸಂದರ್ಭದಲ್ಲಿ ನಾವು ಫಲಾಪೇಕ್ಷೆಯಿಲ್ಲದೆ ಸೇವೆ ಮಾಡಿ, ಆಂತರ್ಯದ ಸಂತಸ ಕಾಣುವ ಪ್ರವೃತ್ತಿ ರೂಢಿಸಿಕೊಳ್ಳಬೇಕು. ರೆಡ್ಕ್ರಾಸ್ ಮೂಲಕ ವೈಯಕ್ತಿಕ ಕೌಶಲಗಳನ್ನು ಬೆಳೆಸಿಕೊಳ್ಳುವುದರ ಜೊತೆಗೆ ಸಮಾಜಕ್ಕೆ ಸ್ಪಂದಿಸಬೇಕು’ ಎಂದು ಸಲಹೆ ನೀಡಿದರು.</p>.<p>ಮಂಗಳೂರು ವಿಶ್ವವಿದ್ಯಾಲಯದ ರೆಡ್ಕ್ರಾಸ್ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ ಮಾತನಾಡಿ, ರೆಡ್ಕ್ರಾಸ್ ವ್ಯಕ್ತಿಯನ್ನು ಸಮಾಜಮುಖಿ ಮಾಡುತ್ತದೆ. ಜೊತೆಗೆ ತಾರತಮ್ಯರಹಿತ, ತಟಸ್ಥ, ಸ್ವತಂತ್ರ, ಸ್ವಯಂ ಸೇವೆ ಮತ್ತು ಸಾರ್ವತ್ರಿಕತೆಯ ಅಮೂಲ್ಯ ಪಾಠ ಬೋಧಿಸುತ್ತದೆ ಎಂದರು.</p>.<p>ಕಾಲೇಜಿನ ಪ್ರಾಂಶುಪಾಲ ಡಾ.ಎ. ಹರೀಶ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಯುವ ರೆಡ್ಕ್ರಾಸ್ನ ಕಾರ್ಯಕ್ರಮ ಅಧಿಕಾರಿ ಡಾ. ಕುಮಾರಸ್ವಾಮಿ ಎಂ. ಸ್ವಾಗತಿಸಿದರು. ಪ್ರಣಾಮ್ ಶೆಟ್ಟಿ ನಿರೂಪಿಸಿದರು. ವಿದ್ಯಾರ್ಥಿ ಕಾರ್ಯದರ್ಶಿ ನಿಶಾಂತ ಕುಮಾರ್, ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ‘ನಮ್ಮೊಳಗಿನ ಮಾನವೀಯತೆಯ ಕರೆಗೆ ಓಗೊಟ್ಟು ಪ್ರೋತ್ಸಾಹ, ಒತ್ತಡಗಳಿಲ್ಲದೇ ಸಹಾಯ ಮಾಡುವ ಅದ್ಭುತ ಪ್ರವೃತ್ತಿಯೇ ಸ್ವಯಂಸೇವೆ. ಇದರ ಅಗತ್ಯ ಹಿಂದೆಂದಿಗಿಂತಲೂ ಈಗ ಹೆಚ್ಚಿದೆ’ ಎಂದು ಜಿಲ್ಲಾ ಭಾರತೀಯ ರೆಡ್ಕ್ರಾಸ್ ಸೊಸೈಟಿಯ ಯುವ ರೆಡ್ಕ್ರಾಸ್ ಸಂಯೋಜಕ ಸಚೇತ್ ಸುವರ್ಣ ಅಭಿಪ್ರಾಯಪಟ್ಟರು.</p>.<p>ಮಂಗಳೂರು ವಿಶವ್ವಿದ್ಯಾಲಯ ಮತ್ತು ವಿಶ್ವವಿದ್ಯಾಲಯ ಕಾಲೇಜಿನ ಯುವ ರೆಡ್ಕ್ರಾಸ್ ಘಟಕಗಳ ಆಶ್ರಯದಲ್ಲಿ ಬುಧವಾರ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ರೆಡ್ಕ್ರಾಸ್ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪರಿಚಯ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.</p>.<p>‘ಹೆನ್ರಿ ಡ್ಯುನಂಟ್ ಸ್ಥಾಪಿಸಿದ ಅಂತರರಾಷ್ಟ್ರೀಯ ಸಂಘಟನೆ ರೆಡ್ಕ್ರಾಸ್ಗೆ 100 ವರ್ಷ ಸಂದ ಈ ಸಂದರ್ಭದಲ್ಲಿ ನಾವು ಫಲಾಪೇಕ್ಷೆಯಿಲ್ಲದೆ ಸೇವೆ ಮಾಡಿ, ಆಂತರ್ಯದ ಸಂತಸ ಕಾಣುವ ಪ್ರವೃತ್ತಿ ರೂಢಿಸಿಕೊಳ್ಳಬೇಕು. ರೆಡ್ಕ್ರಾಸ್ ಮೂಲಕ ವೈಯಕ್ತಿಕ ಕೌಶಲಗಳನ್ನು ಬೆಳೆಸಿಕೊಳ್ಳುವುದರ ಜೊತೆಗೆ ಸಮಾಜಕ್ಕೆ ಸ್ಪಂದಿಸಬೇಕು’ ಎಂದು ಸಲಹೆ ನೀಡಿದರು.</p>.<p>ಮಂಗಳೂರು ವಿಶ್ವವಿದ್ಯಾಲಯದ ರೆಡ್ಕ್ರಾಸ್ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ ಮಾತನಾಡಿ, ರೆಡ್ಕ್ರಾಸ್ ವ್ಯಕ್ತಿಯನ್ನು ಸಮಾಜಮುಖಿ ಮಾಡುತ್ತದೆ. ಜೊತೆಗೆ ತಾರತಮ್ಯರಹಿತ, ತಟಸ್ಥ, ಸ್ವತಂತ್ರ, ಸ್ವಯಂ ಸೇವೆ ಮತ್ತು ಸಾರ್ವತ್ರಿಕತೆಯ ಅಮೂಲ್ಯ ಪಾಠ ಬೋಧಿಸುತ್ತದೆ ಎಂದರು.</p>.<p>ಕಾಲೇಜಿನ ಪ್ರಾಂಶುಪಾಲ ಡಾ.ಎ. ಹರೀಶ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಯುವ ರೆಡ್ಕ್ರಾಸ್ನ ಕಾರ್ಯಕ್ರಮ ಅಧಿಕಾರಿ ಡಾ. ಕುಮಾರಸ್ವಾಮಿ ಎಂ. ಸ್ವಾಗತಿಸಿದರು. ಪ್ರಣಾಮ್ ಶೆಟ್ಟಿ ನಿರೂಪಿಸಿದರು. ವಿದ್ಯಾರ್ಥಿ ಕಾರ್ಯದರ್ಶಿ ನಿಶಾಂತ ಕುಮಾರ್, ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>