ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, 'ಸ್ವತಂತ್ರ ಭಾರತದಲ್ಲಿ ಮೊದಲಬಾರಿಗೆ ರೈತರು ತಮ್ಮ ಉತ್ಪನ್ನಗಳನ್ನು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ದೇಶದ ಯಾವುದೇ ಭಾಗದಲ್ಲಿ ಉತ್ತಮ ಬೆಲೆಗೆ ಮಾರಬಹುದಾಗಿದೆ. ಕನಿಷ್ಠ ಬೆಂಬಲ ಬೆಲೆ ಮುಂದುವರಿಯಲಿದ್ದು ರೈತರು ಆಹಾರ ತಯಾರಿಕಾ ಕೈಗಾರಿಕೆಗಳೊಂದಿಗೆ ನೇರ ಒಪ್ಪಂದ ಮಾಡಿ ತಮ್ಮ ಇಚ್ಛಿತ ಬೆಲೆಯನ್ನು ಪಡೆಯಬಹುದಾಗಿದೆ' ಎಂದು ಹೇಳಿದ್ದಾರೆ.