ವಿಧಾನ ಪರಿಷತ್ ಚುನಾವಣೆಯಲ್ಲಿ 17ರಿಂದ 18 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ದೇಶದ ಅಭಿವೃದ್ಧಿ ಪರವಾದ ಆಡಳಿತ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ನೀಡುತ್ತಿರುವ ಪ್ರಾಮಾಣಿಕ ಆಡಳಿತದಿಂದಾಗಿ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸರ್ಪ ಸಂಸ್ಕಾರ ಸೇವೆ: ನಾರಾಯಣ ಸ್ವಾಮಿ ಅವರು ಶುಕ್ರವಾರ ಕುಕ್ಕೆ ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆ ನಡೆಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಸದಸ್ಯರಾದ ವನಜಾ.ವಿ.ಭಟ್, ಪ್ರಸನ್ನ ದರ್ಬೆ, ಶೋಭಾ ಗಿರಿಧರ್, ಪಿಜಿಎಸ್ಎನ್ ಪ್ರಸಾದ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಮನೋಜ್ ಸುಬ್ರಹ್ಮಣ್ಯ, ಚಂದ್ರಶೇಖರ ನಲ್ಲೂರಾಯ, ಎಸ್ಎಸ್ ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್, ಕೆ.ಎಸ್.ಎಸ್ ಕಾಲೇಜು ಪ್ರಾಚಾರ್ಯ ಡಾ.ಗೋವಿಂದ ಎನ್.ಎಸ್, ಪ್ರಮುಖರಾದ ರಾಜೇಶ್ ಎನ್.ಎಸ್, ಗಿರಿಧರ ಸ್ಕಂಧ, ಪ್ರಸಾದ್.ಕೆ.ರೈ ಕುಮಾರಧಾರ ಇದ್ದರು.