‘ಮೋದಿಯವರು ಅಮೇರಿಕದ ಸಂಸತ್ತಿನಲ್ಲಿ ಎರಡು ಸಲ ಭಾಷಣ ಮಾಡಿದ ಏಕೈಕ ಭಾರತೀಯ ಪ್ರಧಾನಿ. ಮೋದಿಯವರ ವಿದೇಶ ಪ್ರವಾಸ ಕೈಗೊಂಡಾಗ ಅನಿವಾಸಿ ಭಾರತೀಯರು ಅವರ ಮಾತುಗಳಿಗಾಗಿ ಕಾಯುತ್ತಾರೆ. ಅಂತರಾಷ್ಟ್ರೀಯ ಕಂಪನಿಗಳು ದೇಶದಲ್ಲಿ ಬಂಡವಾಳ ಹೂಡಲು ಕಾತರಿಸುತ್ತಿವೆ. ಮನಮೋಹನ್ ಸಿಂಗ್ ಅವರಿಗೆ ಹೋಲಿಸಿದಾಗ ಮೋದಿಯವರು ಕಡಿಮೆ ಖರ್ಚಿನಲ್ಲಿ ಹೆಚ್ಚು ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಹೆಚ್ಚು ದೇಶಗಳ ಒಪ್ಪಂದ ಮಾಡಿಕೊಳ್ಳುವ ಮೂಲಕ ದೇಶಕ್ಕೆ ಲಾಭ ಮಾಡಿಕೊಟ್ಟಿದ್ದಾರೆ’ ಎಂದರು.
ಬಂಗಾರಡ್ಕ ವಿಶ್ವೇಶ್ವರ ಭಟ್, ‘ಮೋದಿ ಅವರಿಗೆ ಜನರ ನಾಡಿಮಿಡಿತ ಗೊತ್ತಿದೆ. ಜನರ ಆಶೋತ್ತರಗಳ ಬಗ್ಗೆ ಅರಿವಿದೆ. ಆಂತರಿಕ ಭದ್ರತೆ, ವಿದೇಶಾಂಗ ನೀತಿ, ರಕ್ಷಣೆಯ ಸ್ಪಷ್ಟ ಕಲ್ಪನೆ ಇದೆ. ಹಿಂದಿನ ಪ್ರಧಾನಿಗಳ ವೈಫಲ್ಯಗಳು ಮೋದಿಯವರ ಕಾಲದಲ್ಲಿ ಪುನರಾವರ್ತನೆಯಾಗಿಲ್ಲ’ ಎಂದರು.