ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೆಲವು ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್ ಸಮಸ್ಯೆ ಎದುರಾಗಿದೆ. ಇದೇ ರೀತಿ ಮುಂದುವರಿದರೆ ಜಿಲ್ಲೆಯಲ್ಲೂ ಬೆಂಗ ಳೂರು, ಚಾಮರಾಜನಗರ ಪರಿಸ್ಥಿತಿ ಬರಬಹುದು. ಜಿಲ್ಲಾಡಳಿತ ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ವ್ಯವಸ್ಥೆ ಮಾಡಬೇಕು. ಜನರ ಸಂಕಷ್ಟಕ್ಕೆ ಪ್ರಾಮಾಣಿಕವಾಗಿ ಸ್ಪಂದಿಸುವ ಕೆಲಸವನ್ನು ಆಡಳಿತ ಮಾಡಲಿ ಎಂದು ಒತ್ತಾಯಿಸಿದ್ದಾರೆ.