<p><strong>ಮಂಗಳೂರು:</strong> ಗೌಡ ಸಾರಸ್ವತ ಸಮಾಜದ ಕಾಶೀಮಠ ಸಂಸ್ಥಾನದ ಮಠಾಧೀಶ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತವು ನಗರದ ಕೊಂಚಾಡಿ ಕ್ಷೇತ್ರದ ಕಾಶೀಮಠದ ಶಾಖಾಮಠದಲ್ಲಿ ಶುಕ್ರವಾರ ಮೃತಿಕಾ ಪೂಜನೆಯೊಂದಿಗೆ ಪ್ರಾರಂಭವಾವಾಯಿತು.</p>.<p>ಪ್ರಾತಃಕಾಲ ಸಂಸ್ಥಾನದ ದೇವರುಗಳಿಗೆ ಪಂಚಾಮೃತ, ಗಂಗಾಭಿಷೇಕ, ಲಘು ವಿಷ್ಣು ಅಭಿಷೇಕ, ಶತಕಲಶಾಭಿಷೇಕ ಬಳಿಕ ಪವಮಾನ ಅಭಿಷೇಕಗಳು ಶ್ರೀಗಳಿಂದ ನೆರವೇರಿದವು. ಸಂಜೆ ಮೃತಿಕಾ ಪೂಜನೆ ಬಳಿಕ ಸಭಾ ಕಾರ್ಯಕ್ರಮ ಜರುಗಿತು.</p>.<p>ಸಮಾಜದವರಿಗೆ ಪಾಲ್ಗೊಳ್ಳುವ ಅಥವಾ ಭಾಗವಹಿಸುವ ಅವಕಾಶವಿರುವುದಿಲ್ಲ. ಚಾತುರ್ಮಾಸ್ಯ ವ್ರದ ಪ್ರಯುಕ್ತ ಸಂಯಮೀಂದ್ರ ತೀರ್ಥರು ಜೂನ್ 30 ರಂದು ಕೊಂಚಾಡಿ ಶಾಖಾಮಠ ತಲುಪಿದ್ದರು. ಆ ಸಂದರ್ಭದಲ್ಲಿ ಶಾಖಾಮಠದ ವ್ಯವಸ್ಥಾಪಕ ಸಮಿತಿ, ವೈದಿಕರಿಂದ ಪೂರ್ಣ ಕುಂಭ ಸ್ವಾಗತ ನೀಡಲಾಗಿತ್ತು.</p>.<p>ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಕ್ತಾದಿಗಳು ಕ್ಷೇತ್ರಕ್ಕೆ ಭೇಟಿ ನೀಡುವುದನ್ನು ನಿರ್ಬಂಧಿಸಲಾಗಿದೆ. ಎಲ್ಲರ ಹಿತದೃಷ್ಟಿಯಿಂದ ಈ ಬದಲಾವಣೆ ಮಾಡಲಾಗಿದ್ದು, ಭಕ್ತಾದಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುವಂತೆ ಚಾತುರ್ಮಾಸ್ಯ ಸಮಿತಿಯ ಡಿ.ವಾಸುದೇವ್ ಕಾಮತ್ ಮತ್ತು ಕಸ್ತೂರಿ ಸದಾಶಿವ ಪೈ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಗೌಡ ಸಾರಸ್ವತ ಸಮಾಜದ ಕಾಶೀಮಠ ಸಂಸ್ಥಾನದ ಮಠಾಧೀಶ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತವು ನಗರದ ಕೊಂಚಾಡಿ ಕ್ಷೇತ್ರದ ಕಾಶೀಮಠದ ಶಾಖಾಮಠದಲ್ಲಿ ಶುಕ್ರವಾರ ಮೃತಿಕಾ ಪೂಜನೆಯೊಂದಿಗೆ ಪ್ರಾರಂಭವಾವಾಯಿತು.</p>.<p>ಪ್ರಾತಃಕಾಲ ಸಂಸ್ಥಾನದ ದೇವರುಗಳಿಗೆ ಪಂಚಾಮೃತ, ಗಂಗಾಭಿಷೇಕ, ಲಘು ವಿಷ್ಣು ಅಭಿಷೇಕ, ಶತಕಲಶಾಭಿಷೇಕ ಬಳಿಕ ಪವಮಾನ ಅಭಿಷೇಕಗಳು ಶ್ರೀಗಳಿಂದ ನೆರವೇರಿದವು. ಸಂಜೆ ಮೃತಿಕಾ ಪೂಜನೆ ಬಳಿಕ ಸಭಾ ಕಾರ್ಯಕ್ರಮ ಜರುಗಿತು.</p>.<p>ಸಮಾಜದವರಿಗೆ ಪಾಲ್ಗೊಳ್ಳುವ ಅಥವಾ ಭಾಗವಹಿಸುವ ಅವಕಾಶವಿರುವುದಿಲ್ಲ. ಚಾತುರ್ಮಾಸ್ಯ ವ್ರದ ಪ್ರಯುಕ್ತ ಸಂಯಮೀಂದ್ರ ತೀರ್ಥರು ಜೂನ್ 30 ರಂದು ಕೊಂಚಾಡಿ ಶಾಖಾಮಠ ತಲುಪಿದ್ದರು. ಆ ಸಂದರ್ಭದಲ್ಲಿ ಶಾಖಾಮಠದ ವ್ಯವಸ್ಥಾಪಕ ಸಮಿತಿ, ವೈದಿಕರಿಂದ ಪೂರ್ಣ ಕುಂಭ ಸ್ವಾಗತ ನೀಡಲಾಗಿತ್ತು.</p>.<p>ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಕ್ತಾದಿಗಳು ಕ್ಷೇತ್ರಕ್ಕೆ ಭೇಟಿ ನೀಡುವುದನ್ನು ನಿರ್ಬಂಧಿಸಲಾಗಿದೆ. ಎಲ್ಲರ ಹಿತದೃಷ್ಟಿಯಿಂದ ಈ ಬದಲಾವಣೆ ಮಾಡಲಾಗಿದ್ದು, ಭಕ್ತಾದಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುವಂತೆ ಚಾತುರ್ಮಾಸ್ಯ ಸಮಿತಿಯ ಡಿ.ವಾಸುದೇವ್ ಕಾಮತ್ ಮತ್ತು ಕಸ್ತೂರಿ ಸದಾಶಿವ ಪೈ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>