ಮಂಗಳೂರು: ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿದ್ದು, ಕೇರಳದಿಂದ ಬರುವವರ ಆರೋಗ್ಯ ತಪಾಸಣೆಗಾಗಿ ಚೆಕ್ ಪೋಸ್ಟ್ ಆರಂಭಿಸಲಾಗಿದೆ.
ಐದು ರಸ್ತೆಗಳನ್ನು ಹೊರತುಪಡಿಸಿ, ಉಳಿದೆಲ್ಲ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಐದು ಚೆಕ್ ಪೋಸ್ಟ್ ಗಳ ಮೂಲಕ ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯವಾಗಿದೆ. ತಹಸೀಲ್ದಾರ್, ಡಿಎಚ್ ಒ, ಪೊಲೀಸರಿಂದ ಕೇರಳದಿಂದ ಬರುವವರ ವಿಚಾರಣೆ ಮಾಡಲಾಗುತ್ತಿದೆ.
ದಕ್ಷಿಣ ಕನ್ನಡದ ಜಿಲ್ಲಾಡಳಿತದ ಕ್ರಮವನ್ನು ವಿರೋಧಿಸಿ ಗಡಿನಾಡು ಕನ್ನಡಿಗರು ತಲಪಾಡಿ ಗೇಟ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.