ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರಿ ಮಳೆ: ಚೆಲ್ಯಡ್ಕ ಸೇತುವೆ ಜಲಾವೃತ

Last Updated 27 ಜೂನ್ 2018, 14:04 IST
ಅಕ್ಷರ ಗಾತ್ರ

ಪುತ್ತೂರು : ಮಂಗಳವಾರ ಸಂಜೆಯಿಂದ ಎಡಬಿಡದೆ ಸುರಿಯಲಾರಂಭಿಸಿದ ಭಾರಿ ಮಳೆ ಬುಧವಾರವೂ ಮುಂದುವರಿದಿದ್ದು, ಪುತ್ತೂರು–ಪಾಣಾಜೆ ರಸ್ತೆಯಲ್ಲಿನ ಚೆಲ್ಯಡ್ಕ ಮುಳುಗು ಸೇತುವೆ ಮತ್ತೆ ಜಲಾವೃತಗೊಂಡಿದೆ.

ಚೆಲ್ಯಡ್ಕ ಮುಳುಗು ಸೇತುವೆ ಜಲಾವೃತಗೊಂಡ ಹಿನ್ನಲೆಯಲ್ಲಿ ಪುತ್ತೂರು -ಪಾಣಾಜೆ ರಸ್ತೆಯ ಕುಂಜೂರುಪಂಜ- ಅಜ್ಜಿಕಲ್ಲು -ಚೆಲ್ಯಡ್ಕ -ಉಪ್ಪಳಿಗೆ ನಡುವಣ ಸಂಚಾರ ಸ್ಥಗಿತಗೊಡಿದ್ದು, ಈ ಭಾಗದ ಮಂದಿ ಸುತ್ತು ಬಳಸಿ ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಪುತ್ತೂರಿನ ಬೈಪಾಸ್ ರಸ್ತೆ ಬದಿಯ ಗುಡ್ಡ ಕುಸಿತಕ್ಕೊಳಗಾಗುವ ಭೀತಿ ಎದುರಾಗಿದೆ. ಪುತ್ತೂರಿನ ಉಪನೋಂದಣಿ ಕಚೇರಿ ಎದುರು ಸರ್ಕಾರಿ ಆಸ್ಪತ್ರೆಯ ಪ್ರವೇಶ ದ್ವಾರದ ಬಳಿ ಚರಂಡಿ ಮುಚ್ಚುಗಡೆಯಾಗಿ ಮಳೆನೀರು ತುಂಬಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT