<p><strong>ಬೆಳ್ತಂಗಡಿ:</strong> ಪೊಲೀಸರು ಸಮಾಜದ ರಕ್ಷಣೆಗಾಗಿರುವರು. ಮಕ್ಕಳು ಪೊಲೀಸರನ್ನು ಕಂಡು ಭಯ ಪಡುವ ಅವ್ಯಶ್ಯಕತೆ ಇಲ್ಲ. ಸ್ನೇಹಪರ ವಾತಾವರಣ ಹಾಗೂ ವಿಧಾನವನ್ನು ಸಂಯೋಜಿಸುವ ಉದ್ದೇಶದಿಂದ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮಕ್ಕಳ ಸ್ನೇಹಿ ಘಟಕ ಸ್ಥಾಪಿಸಲಾಗುತ್ತಿದೆ ಎಂದು ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ.ಸುಬ್ರಪುರ್ ಮಠ ಹೇಳಿದರು.</p>.<p>ಬುಧವಾರ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆದ ತೆರೆದ ಮನೆ ಕಾರ್ಯಕ್ರಮದಲ್ಲಿ ಪೊಲೀಸ್ ಠಾಣೆಗೆ ಭೇಟಿ ನೀಡಿದ ಬೆಳ್ತಂಗಡಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ವಿಶೇಷ ಕೊಠಡಿ ಸದ್ಯದಲ್ಲಿ ತೆರೆಯಲಿದ್ದು, ಮಕ್ಕಳ ಸ್ನೇಹಿ ಅಧಿಕಾರಿಗಳು ಆ ಕೊಠಡಿಯಲ್ಲಿರುತ್ತಾರೆ. ಆದ್ದರಿಂದ ತಮಗೆ ಇರುವ ಸಮಸ್ಯೆಗಳ ಬಗ್ಗೆ ಅವರಲ್ಲಿ ವಿವರಿಸಬಹುದು ಎಂದು ಹೇಳಿದರು.</p>.<p>ಬೆಳ್ತಂಗಡಿ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ರವಿ ಬಿ.ಎಸ್. ಮಾತನಾಡಿ, 'ಮಕ್ಕಳ ಹಕ್ಕುಗಳು, ಶಿಕ್ಷಣದ ಮಹತ್ವ, ಬಾಲ್ಯವಿವಾಹ, ಲೈಂಗಿಕ ಅಪರಾಧ ಸೇರಿದಂತೆ ಮಕ್ಕಳ ವಿರುದ್ಧದ ಅಪರಾಧಗಳ ಕುರಿತು ಮಾಹಿತಿ ನೀಡಿದರು.</p>.<p>ಈ ಸಂದರ್ಭ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ತಂಗಡಿ:</strong> ಪೊಲೀಸರು ಸಮಾಜದ ರಕ್ಷಣೆಗಾಗಿರುವರು. ಮಕ್ಕಳು ಪೊಲೀಸರನ್ನು ಕಂಡು ಭಯ ಪಡುವ ಅವ್ಯಶ್ಯಕತೆ ಇಲ್ಲ. ಸ್ನೇಹಪರ ವಾತಾವರಣ ಹಾಗೂ ವಿಧಾನವನ್ನು ಸಂಯೋಜಿಸುವ ಉದ್ದೇಶದಿಂದ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮಕ್ಕಳ ಸ್ನೇಹಿ ಘಟಕ ಸ್ಥಾಪಿಸಲಾಗುತ್ತಿದೆ ಎಂದು ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ.ಸುಬ್ರಪುರ್ ಮಠ ಹೇಳಿದರು.</p>.<p>ಬುಧವಾರ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆದ ತೆರೆದ ಮನೆ ಕಾರ್ಯಕ್ರಮದಲ್ಲಿ ಪೊಲೀಸ್ ಠಾಣೆಗೆ ಭೇಟಿ ನೀಡಿದ ಬೆಳ್ತಂಗಡಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ವಿಶೇಷ ಕೊಠಡಿ ಸದ್ಯದಲ್ಲಿ ತೆರೆಯಲಿದ್ದು, ಮಕ್ಕಳ ಸ್ನೇಹಿ ಅಧಿಕಾರಿಗಳು ಆ ಕೊಠಡಿಯಲ್ಲಿರುತ್ತಾರೆ. ಆದ್ದರಿಂದ ತಮಗೆ ಇರುವ ಸಮಸ್ಯೆಗಳ ಬಗ್ಗೆ ಅವರಲ್ಲಿ ವಿವರಿಸಬಹುದು ಎಂದು ಹೇಳಿದರು.</p>.<p>ಬೆಳ್ತಂಗಡಿ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ರವಿ ಬಿ.ಎಸ್. ಮಾತನಾಡಿ, 'ಮಕ್ಕಳ ಹಕ್ಕುಗಳು, ಶಿಕ್ಷಣದ ಮಹತ್ವ, ಬಾಲ್ಯವಿವಾಹ, ಲೈಂಗಿಕ ಅಪರಾಧ ಸೇರಿದಂತೆ ಮಕ್ಕಳ ವಿರುದ್ಧದ ಅಪರಾಧಗಳ ಕುರಿತು ಮಾಹಿತಿ ನೀಡಿದರು.</p>.<p>ಈ ಸಂದರ್ಭ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>