ಬಾಲಕನ ಅಪಹರಣ: ₹17 ಕೋಟಿಗೆ ಬೇಡಿಕೆ

ಮಂಗಳೂರು: ಉಜಿರೆಯಿಂದ ಗುರುವಾರ ಸಂಜೆ ಅಪರಿಹರಿಸಲಾಗಿರುವ 8 ವರ್ಷದ ಬಾಲಕನ ಬಿಡುಗಡೆಗೆ ₹17 ಕೋಟಿನೀಡುವಂತೆ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ.
ಗುರುವಾರ ಸಂಜೆ ವೇಳೆ ಮನೆಯಂಗಳದಲ್ಲಿ ಆಟವಾಡುತಿದ್ದ 8 ವರ್ಷದ ಮಗುವನ್ನು ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಅಪಹರಣ ಮಾಡಿದ್ದರು.
ಉಜಿರೆಯ ಬಿಜೋಯ್ ಏಜೆನ್ಸಿಸ್ ಮಾಲೀಕ, ಉದ್ಯಮಿ ಬಿಜೋಯ್ ಅವರ ಪುತ್ರ 8 ವರ್ಷದ ಅನುಭವ್ ಅಪಹರಣಗೊಂಡ ಬಾಲಕ. ಬಾಲಕನ ಅಜ್ಜ ಎ.ಕೆ. ಶಿವನ್ ಎದುರೇ ಈ ಕೃತ್ಯ ನಡೆದಿದೆ.
ಅಪಹರಣದ ಬಳಿಕ ಅಪಹರಣಕಾರರು ಬಾಲಕನ ಮನೆಯವರನ್ನು ಫೋನ್ ಮೂಲಕ ಸಂಪರ್ಕಿಸಿ ₹17 ಕೋಟಿ ಕೋಟಿಯನ್ನು ಬಿಟ್ ಕಾಯಿನ್ ರೂಪದಲ್ಲಿ ನೀಡುವಂತೆಯೂ ತಿಳಿಸಿದ್ದಾರೆ. ಈ ಬಗ್ಗೆ ಬಾಲಕನ ಅಜ್ಜ ಎ.ಕೆ. ಶಿವನ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.