ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕನ ಅಪಹರಣ: ₹17 ಕೋಟಿಗೆ ಬೇಡಿಕೆ

Last Updated 18 ಡಿಸೆಂಬರ್ 2020, 5:44 IST
ಅಕ್ಷರ ಗಾತ್ರ

ಮಂಗಳೂರು: ಉಜಿರೆಯಿಂದ ಗುರುವಾರ ಸಂಜೆ ಅಪರಿಹರಿಸಲಾಗಿರುವ‌ 8 ವರ್ಷದ ಬಾಲಕನ ಬಿಡುಗಡೆಗೆ ₹17 ಕೋಟಿ‌ನೀಡುವಂತೆ‌ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ.

ಗುರುವಾರ ಸಂಜೆ ವೇಳೆ ಮನೆಯಂಗಳದಲ್ಲಿ ಆಟವಾಡುತಿದ್ದ 8 ವರ್ಷದ ಮಗುವನ್ನು ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಅಪಹರಣ ಮಾಡಿದ್ದರು.

ಉಜಿರೆಯ ಬಿಜೋಯ್ ಏಜೆನ್ಸಿಸ್ ಮಾಲೀಕ, ಉದ್ಯಮಿ ಬಿಜೋಯ್ ಅವರ ಪುತ್ರ 8 ವರ್ಷದ ಅನುಭವ್ ಅಪಹರಣಗೊಂಡ ಬಾಲಕ. ಬಾಲಕನ ಅಜ್ಜ ಎ.ಕೆ. ಶಿವನ್ ಎದುರೇ ಈ ಕೃತ್ಯ ನಡೆದಿದೆ.

ಅಪಹರಣದ ಬಳಿಕ ಅಪಹರಣಕಾರರು ಬಾಲಕನ ಮನೆಯವರನ್ನು ಫೋನ್ ಮೂಲಕ ಸಂಪರ್ಕಿಸಿ ₹17 ಕೋಟಿ‌ ಕೋಟಿಯನ್ನು ಬಿಟ್ ಕಾಯಿನ್ ರೂಪದಲ್ಲಿ ನೀಡುವಂತೆಯೂ ತಿಳಿಸಿದ್ದಾರೆ. ಈ ಬಗ್ಗೆ ಬಾಲಕನ ಅಜ್ಜ ಎ.ಕೆ. ಶಿವನ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT