<p><strong>ಸುಳ್ಯ:</strong> ಇಲ್ಲಿನ ಪಂಚಾಯಿತಿ ವ್ಯಾಪ್ತಿಯ ದುಗಲಡ್ಕ ಕಂದಡ್ಕಕ್ಕೆ ಬುಧವಾರ ರಾತ್ರಿ ಸಿ.ಡಿ.ಪಿ.ಒ. ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಬಾಲ್ಯವಿವಾಹವೊಂದನ್ನು ತಡೆದ ಘಟನೆ ನಡೆದಿದೆ.</p>.<p>ಕಂದಡ್ಕದ ತಮಿಳು ಕುಟುಂಬವೊಂದರ ಪ್ರತಾಪ ಎಂಬ 26 ವರ್ಷದ ಯುವಕನಿಗೆ ಗುರುವಾರ ಮೈಸೂರಿನ ಹುಡುಗಿಯೊಂದಿಗೆ ಮದುವೆ ನಡೆಯುವುದಿತ್ತು. ಈ ಹುಡುಗಿಗೆ 18 ವರ್ಷ ಆಗಿಲ್ಲ ಎಂದು ಜು.14 ರಂದು ಸಂಜೆ ಸಿ.ಡಿ.ಪಿ.ಒ.ರವರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.</p>.<p>ಮಾಹಿತಿ ಬಂದ ಕೂಡಲೇ ಸಿ.ಡಿ.ಪಿ.ಒ. ರಶ್ಮಿ ಅಶೋಕ್ ಅವರು ಇಲಾಖೆಯ ಮೇಲ್ವಿಚಾರಕಿ ಹಾಗೂ ಸಹಾಯಕ ಮಕ್ಕಳ ಸಂರಕ್ಷಣಾಧಿಕಾರಿ ದೀಪಿಕಾ, ಗ್ರಾಮಕರಣಿಕ ತಿಪ್ಪೇಶ್, ನಾಲ್ಕು ಮಂದಿ ಪೊಲೀಸರ ಜತೆಗೆ ಕಂದಡ್ಕ ಎಂಬ ಸ್ಥಳಕ್ಕೆ ಭೇಟಿ ನೀಡಿದ್ದಾರೆ.</p>.<p>ಆಗಲೇ ಮದುವೆಗೆ ಹುಡುಗಿ ಕಡೆಯವರು ಮೈಸೂರಿನಿಂದ ಆಗಮಿಸಿದ್ದರು.ಅವರ ಜೊತೆ ವಿಚಾರಿಸಿದಾಗ ಹುಡುಗಿಗೆ 18 ವರ್ಷ ತುಂಬಿರುವ ಬಗ್ಗೆ ದಾಖಲೆ ಸಲ್ಲಿಸಲು ಅವರಿಗೆ ಸಾಧ್ಯವಾಗಲಿಲ್ಲವೆಂದು ಗೊತ್ತಾಗಿದೆ. ಬಳಿಕ ಅಧಿಕಾರಿಗಳು ಬಾಲ್ಯವಿವಾಹದ ಸಮಸ್ಯೆಗಳ ಬಗ್ಗೆ ವಿವರಿಸಿದ್ದಾರೆ.</p>.<p><a href="https://www.prajavani.net/karnataka-news/acb-raid-in-karnataka-here-is-the-nine-officials-list-848295.html" itemprop="url">ಒಂಬತ್ತು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ: ರಾಜ್ಯದ ಹಲವೆಡೆ ಶೋಧ </a></p>.<p>18 ವರ್ಷ ತುಂಬಿದ ಬಳಿಕವೇ ಮದುವೆ ಮಾಡಿಸುವುದಾಗಿ ಹೇಳಿ ಯುವತಿಯ ಮನೆಯವರು ಮೈಸೂರಿಗೆ ಹಿಂತಿರುಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಳ್ಯ:</strong> ಇಲ್ಲಿನ ಪಂಚಾಯಿತಿ ವ್ಯಾಪ್ತಿಯ ದುಗಲಡ್ಕ ಕಂದಡ್ಕಕ್ಕೆ ಬುಧವಾರ ರಾತ್ರಿ ಸಿ.ಡಿ.ಪಿ.ಒ. ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಬಾಲ್ಯವಿವಾಹವೊಂದನ್ನು ತಡೆದ ಘಟನೆ ನಡೆದಿದೆ.</p>.<p>ಕಂದಡ್ಕದ ತಮಿಳು ಕುಟುಂಬವೊಂದರ ಪ್ರತಾಪ ಎಂಬ 26 ವರ್ಷದ ಯುವಕನಿಗೆ ಗುರುವಾರ ಮೈಸೂರಿನ ಹುಡುಗಿಯೊಂದಿಗೆ ಮದುವೆ ನಡೆಯುವುದಿತ್ತು. ಈ ಹುಡುಗಿಗೆ 18 ವರ್ಷ ಆಗಿಲ್ಲ ಎಂದು ಜು.14 ರಂದು ಸಂಜೆ ಸಿ.ಡಿ.ಪಿ.ಒ.ರವರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.</p>.<p>ಮಾಹಿತಿ ಬಂದ ಕೂಡಲೇ ಸಿ.ಡಿ.ಪಿ.ಒ. ರಶ್ಮಿ ಅಶೋಕ್ ಅವರು ಇಲಾಖೆಯ ಮೇಲ್ವಿಚಾರಕಿ ಹಾಗೂ ಸಹಾಯಕ ಮಕ್ಕಳ ಸಂರಕ್ಷಣಾಧಿಕಾರಿ ದೀಪಿಕಾ, ಗ್ರಾಮಕರಣಿಕ ತಿಪ್ಪೇಶ್, ನಾಲ್ಕು ಮಂದಿ ಪೊಲೀಸರ ಜತೆಗೆ ಕಂದಡ್ಕ ಎಂಬ ಸ್ಥಳಕ್ಕೆ ಭೇಟಿ ನೀಡಿದ್ದಾರೆ.</p>.<p>ಆಗಲೇ ಮದುವೆಗೆ ಹುಡುಗಿ ಕಡೆಯವರು ಮೈಸೂರಿನಿಂದ ಆಗಮಿಸಿದ್ದರು.ಅವರ ಜೊತೆ ವಿಚಾರಿಸಿದಾಗ ಹುಡುಗಿಗೆ 18 ವರ್ಷ ತುಂಬಿರುವ ಬಗ್ಗೆ ದಾಖಲೆ ಸಲ್ಲಿಸಲು ಅವರಿಗೆ ಸಾಧ್ಯವಾಗಲಿಲ್ಲವೆಂದು ಗೊತ್ತಾಗಿದೆ. ಬಳಿಕ ಅಧಿಕಾರಿಗಳು ಬಾಲ್ಯವಿವಾಹದ ಸಮಸ್ಯೆಗಳ ಬಗ್ಗೆ ವಿವರಿಸಿದ್ದಾರೆ.</p>.<p><a href="https://www.prajavani.net/karnataka-news/acb-raid-in-karnataka-here-is-the-nine-officials-list-848295.html" itemprop="url">ಒಂಬತ್ತು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ: ರಾಜ್ಯದ ಹಲವೆಡೆ ಶೋಧ </a></p>.<p>18 ವರ್ಷ ತುಂಬಿದ ಬಳಿಕವೇ ಮದುವೆ ಮಾಡಿಸುವುದಾಗಿ ಹೇಳಿ ಯುವತಿಯ ಮನೆಯವರು ಮೈಸೂರಿಗೆ ಹಿಂತಿರುಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>