ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಮೂಲಕ ಆಯಾ ಜಿಲ್ಲೆಯ ಮಾಹಿತಿ ಸಂಗ್ರಹಿಸಿದಾಗ ಈ ಆಘಾತಕಾರಿ ಮಾಹಿತಿ ಗೊತ್ತಾಗಿದೆ. ಆಯೋಗದ ವತಿಯಿಂದ ಪುನರ್ ಸಮೀಕ್ಷೆ ಮಾಡಲಾಗುತ್ತಿದ್ದು, ಇಂತಹ ಪ್ರಕರಣ ಪತ್ತೆಯಾಗಿರುವ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರ ಸಹಕಾರ ಪಡೆಯಲಾಗುತ್ತಿದೆ. ಆಯೋಗದ ಸದಸ್ಯರಿಗೆ ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದ್ದು, ಸಂತ್ರಸ್ತ ಬಾಲಕಿಯರನ್ನು ಸದಸ್ಯರೇ ಖುದ್ದು ಭೇಟಿ ಮಾಡಿ, ಸತ್ಯಾಸತ್ಯತೆ ಪರಿಶೀಲಿಸಿ ವರದಿ ಸಿದ್ಧಪಡಿಸಲಿದ್ದಾರೆ. ಈ ತಿಂಗಳ ಕೊನೆಯಲ್ಲಿ ಸಮೀಕ್ಷೆ ಪೂರ್ಣಗೊಂಡು ಸಮಗ್ರ ವರದಿ ಸಿದ್ಧವಾಗುವ ನಿರೀಕ್ಷೆ ಇದೆ’ ಎಂದರು.