ಚೈಲ್ಡ್ಲೈನ್ ನಿರ್ದೇಶಕರ ನಿರ್ದೇಶನ ಮೇರೆಗೆ ಆಪ್ತಸಮಾಲೋಚಕರು, ಬಾಲಕನಿಗೆ ಆಪ್ತ ಸಮಾಲೋಚನೆಯನ್ನು ನಡೆಸಿದ್ದು, ‘ನಾನು ಆಂಧ್ರಪ್ರದೇಶದ ಓಂಗೋಳ ಹತ್ತಿರದ ಸೀತಾರಾಮ್ ಪುರದ ಬಾಲಕನಾಗಿದ್ದು, ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಒಬ್ಬಂಟಿಯಾಗಿ ಮಲಗಿದ್ದಾಗ ಶಿಲ್ಪಾ ಎಂಬಾಕೆಯು ಕರೆದುಕೊಂಡು ಬಂದಿದ್ದಾರೆ’ ಎಂದು ಮಾಹಿತಿ ನೀಡಿದ್ದಾನೆ.