<p><strong>ಮಂಗಳೂರು: </strong>ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಬ್ ಇನ್ಸ್ಪೆಕ್ಟರ್ ಜ್ಯೋತಿ ಬಾಯಿ (33) ಅವರು ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಬುಧವಾರ ಮುಂಜಾನೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. </p>.<p>ಜ್ಯೋತಿ ಅವರು 2010ನೇ ತಂಡದ ಅಧಿಕಾರಿ. ಅವರ ಪತಿ ಓಂಬೀರ್ ಸಿಂಗ್ ಪರ್ಮಾರ್ ಅವರು ಮಂಗಳೂರು ರಿಫೈನರೀಸ್ ಆ್ಯಂಡ್ ಪೆಟ್ರೊ ಕೆಮಿಕಲ್ಸ್ (ಎಂಆರ್ಪಿಎಲ್) ಸಂಸ್ಥೆಯಲ್ಲಿ ಸಹಾಯಕ ಕಮಾಂಡಂಟ್ ಆಗಿದ್ದಾರೆ. ಅವರಿಬ್ಬರೂ ರಾಜಸ್ತಾನದ ಭರತಪುರ ಜಿಲ್ಲೆಯವರು.</p>.<p>‘ಕೌಟುಂಬಿಕ ಕಾರಣದಿಂದಾಗಿ ಜ್ಯೋತಿ ಅವರು ಬುಧವಾರ ಬೆಳಿಗ್ಗೆ 6ರಿಂದ 6.15ರ ನಡುವೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಾಯಾಳುವನ್ನು ಚಿಕಿತ್ಸೆಗಾಗಿ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಶಸ್ತ್ರಚಿಕಿತ್ಸೆ ನಡೆಯುತ್ತಿದೆ’ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು.</p>.<p>‘ಆತ್ಮಹತ್ಯೆಗೆ ಯತ್ನಿಸುವ ಮುನ್ನ ಜ್ಯೋತಿ ಅವರು ಪತ್ರವೊಂದನ್ನು ಬರೆದಿದ್ದಾರೆ. ಅದರಲ್ಲಿ, ‘ಕ್ಷಮಿಸು ಅಮ್ಮಾ. ನಾನು ಸ್ವಇಚ್ಛೆಯಿಂದಲೇ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದೇನೆ. ಯಾರೂ ನನಗೆ ಒತ್ತಡ ಹಾಕಿಲ್ಲ’ ಎಂದು ಹಿಂದಿಯಲ್ಲಿ ಬರೆದು ದಿನಾಂಕವನ್ನೂ ನಮೂದಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಬ್ ಇನ್ಸ್ಪೆಕ್ಟರ್ ಜ್ಯೋತಿ ಬಾಯಿ (33) ಅವರು ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಬುಧವಾರ ಮುಂಜಾನೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. </p>.<p>ಜ್ಯೋತಿ ಅವರು 2010ನೇ ತಂಡದ ಅಧಿಕಾರಿ. ಅವರ ಪತಿ ಓಂಬೀರ್ ಸಿಂಗ್ ಪರ್ಮಾರ್ ಅವರು ಮಂಗಳೂರು ರಿಫೈನರೀಸ್ ಆ್ಯಂಡ್ ಪೆಟ್ರೊ ಕೆಮಿಕಲ್ಸ್ (ಎಂಆರ್ಪಿಎಲ್) ಸಂಸ್ಥೆಯಲ್ಲಿ ಸಹಾಯಕ ಕಮಾಂಡಂಟ್ ಆಗಿದ್ದಾರೆ. ಅವರಿಬ್ಬರೂ ರಾಜಸ್ತಾನದ ಭರತಪುರ ಜಿಲ್ಲೆಯವರು.</p>.<p>‘ಕೌಟುಂಬಿಕ ಕಾರಣದಿಂದಾಗಿ ಜ್ಯೋತಿ ಅವರು ಬುಧವಾರ ಬೆಳಿಗ್ಗೆ 6ರಿಂದ 6.15ರ ನಡುವೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಾಯಾಳುವನ್ನು ಚಿಕಿತ್ಸೆಗಾಗಿ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಶಸ್ತ್ರಚಿಕಿತ್ಸೆ ನಡೆಯುತ್ತಿದೆ’ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು.</p>.<p>‘ಆತ್ಮಹತ್ಯೆಗೆ ಯತ್ನಿಸುವ ಮುನ್ನ ಜ್ಯೋತಿ ಅವರು ಪತ್ರವೊಂದನ್ನು ಬರೆದಿದ್ದಾರೆ. ಅದರಲ್ಲಿ, ‘ಕ್ಷಮಿಸು ಅಮ್ಮಾ. ನಾನು ಸ್ವಇಚ್ಛೆಯಿಂದಲೇ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದೇನೆ. ಯಾರೂ ನನಗೆ ಒತ್ತಡ ಹಾಕಿಲ್ಲ’ ಎಂದು ಹಿಂದಿಯಲ್ಲಿ ಬರೆದು ದಿನಾಂಕವನ್ನೂ ನಮೂದಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>