ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಾಜಿ ಸಂಸದ ಶ್ರೀನಿವಾಸ ಮಲ್ಯರ ಕೊಡುಗೆ, ಕರಾವಳಿ ಜಿಲ್ಲೆಯ ಜನರ ತ್ಯಾಗದ ಸಂಕೇತವಾಗಿರುವ ವಿಮಾನ ನಿಲ್ದಾಣವನ್ನು ಖಾಸಗೀಕರಣ ಮಾಡಲಾಗಿದೆ. ಅದಾನಿ ಸಂಸ್ಥೆಗೆ ಮಂಗಳೂರು ವಿಮಾನ ನಿಲ್ದಾಣವನ್ನು ಮಾರಾಟ ಮಾಡಿಲ್ಲ, ನಿರ್ವಹಣೆಗೆ ಮಾತ್ರ ನೀಡಲಾಗಿದೆ. ಖಾಸಗೀಕರಣ ನೆಪದಲ್ಲಿ ಕಂಪನಿ ತುಳುನಾಡಿನ ಅಸ್ಮಿತೆಯ ಮೇಲೆ ದಾಳಿ ಮಾಡುತ್ತಿರುವುದು ಖಂಡನೀಯ’ ಎಂದರು.