ಹೊರಗುತ್ತಿಗೆ ಕಾರ್ಮಿಕರ ಮುಷ್ಕರದಿಂದಾಗಿ ನಗರದ ಕಸ ವಿಲೇವಾರಿ ಹಾಗೂ ಒಳಚರಂಡಿ ನಿರ್ವಹಣೆ ಮಾ. 13 ರಿಂದ ಅಸ್ತವ್ಯಸ್ತವಾಗಿತ್ತು. ನಗರದ ಬೀದಿ ಬೀದಿಗಳಲ್ಲಿ ಕಸ ರಾಶಿ ಬಿದ್ದಿತ್ತು. ಒಳಚರಂಡಿ ವ್ಯವಸ್ಥೆ ನಿರ್ವಹಣೆಯಾಗದ ಪರಿಣಾಮ ನಗರದ ಅನೇಕ ಕಡೆ ಮ್ಯಾನ್ಹೋಲ್ಗಳಲ್ಲಿ ಶೌಚಯುಕ್ತ ಕೊಳಚೆ ನೀರು ಉಕ್ಕಿ ಹರಿಯುತ್ತಿತ್ತು. ಒಳಚರಂಡಿ ಕೊಳವೆಗಳು ಕಟ್ಟಿಕೊಂಡು ದುರ್ನಾತ ಬೀರುವ ಸ್ಥಿತಿ ನಿರ್ಮಾಣವಾಗಿತ್ತು.