‘ಇಲ್ಲಿದ್ದ ಹಳೆಯ ಕಟ್ಟಡವನ್ನು ಮೂರು ವರ್ಷಗಳ ಕೆಳಗೆ ನೆಲಸಮ ಮಾಡಿ ನೂತನ ಕಟ್ಟಡ ಮಾಡುವುದಾಗಿ ಶಿಕ್ಷಣ ಇಲಾಖೆ ಹೇಳಿತ್ತು. ಇಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಿಸಲಾಯಿತು. ಆದರೆ, ಪ್ರಾಥಮಿಕ ಶಾಲೆಗೆ ಈ ಭಾಗ್ಯ ಸಿಕ್ಕಿಲ್ಲ. ಈ ಶಾಲೆಗೆ ಹೊಸ ಕಟ್ಟಡ ಮರೀಚಿಕೆಯಾಗಿದೆ. ಕೊರೋನಾದಿಂದಾಗಿ ಎರಡು ವರ್ಷ ಕಳೆದು ಪ್ರಸ್ತುತ ಒಂದು ವರ್ಷದಲ್ಲಿ ಗಂಭೀರ ಸಮಸ್ಯೆಗಳು ಉದ್ಭವವಾಗಿದೆ. ಪರ್ಯಾಯ ವ್ಯವಸ್ಥೆ ಮಾಡುವುದಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ನೀಡಿದ ಭರವಸೆಗಳು ಗಗನ ಕುಸುಮವಾಗಿದೆ’ ಎಂದು ಡಿವೈಎಫ್ಐ ಜಿಲ್ಲಾ ಘಟಕದ ಕಾರ್ಯದರ್ಶಿ ಸಂತೋಷ್ ಕುಮಾರ್ ದೂರಿದರು.