ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಅಂತರರಾಷ್ಟ್ರೀಯ ಸಮುದ್ರದಂಡೆ ಸ್ವಚ್ಛತೆ ದಿನವಾದ ಸೆ.17ರಂದು ದೇಶದಾದ್ಯಂತ ಸುಮಾರು 7,500 ಕಿ.ಮೀ ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ ನಡೆಯಲಿದೆ. ಇದರ ಭಾಗವಾಗಿ ನಮ್ಮ ಕರಾವಳಿಯಲ್ಲೂ ಸ್ವಚ್ಛತಾ ಕಾರ್ಯ ನಡೆಸಲಾಗುವುದು. ಮಿತ್ರ ಪಟ್ಟಣ ಮುಕ್ತ, ಎನ್ಐಟಿಕೆ, ದೊಡ್ಡಕೊಪ್ಪ, ಗುಡ್ಡೆಕೊಪ್ಪ, ಇಡ್ಯಾ, ಹೊಸಬೆಟ್ಟು, ಚಿತ್ರಾಪುರ, ಮೀನಕಳಿಯ, ಎನ್ಎಂಪಿಟಿ, ತಣ್ಣೀರುಬಾವಿ, ಬೇಂಗ್ರೆ ಹೀಗೆ ಒಟ್ಟು 11 ಪ್ರದೇಶಗಳನ್ನು ಗುರುತಿಸಲಾಗಿದ್ದು, ಸಾರ್ವಜನಿಕರು ಇಲ್ಲಿ ಬಂದು ಸೇರಿಕೊಳ್ಳಬೇಕು. ಜನರ ಸಹಭಾಗಿತ್ವ ಇದ್ದರೆ ಅಭಿಯಾನ ಯಶಸ್ವಿಯಾಗುತ್ತದೆ’ ಎಂದರು.