ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಪ್ಪಿನಂಗಡಿಯ ನೇತ್ರಾವತಿ ನದಿಯ ಸೇತುವೆ ಬಳಿ ನಿರ್ಮಾಣವಾಗುತ್ತಿರುವ ಗುಡ್ಡ ಕುಸಿತಕ್ಕೆ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಮಂಗಳವಾರ ಸಂಜೆ ವೀಕ್ಷಿಸಿದರು.
ಇದಕ್ಕೂ ಮುನ್ನ ಅವರು, ಸುಳ್ಯದಲ್ಲಿ ಭೂಕಂಪನದಿಂದ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಸಂಸದ ನಳಿನ್ ಕುಮಾರ್ ಕಟೀಲ್ , ಕಂದಾಯ ಸಚಿವ ಆರ್ ಅಶೋಕ್, ಸಚಿವರಾದ ವಿ.ಸುನಿಲ್ ಕುಮಾರ್, ಸಿ.ಸಿ. ಪಾಟೀಲ, ಎಸ್. ಅಂಗಾರ ಇದ್ದರು.