ಉಳ್ಳಾಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅರಬ್ಬೀ ಸಮುದ್ರದ ಕಿನಾರೆಯಲ್ಲಿರುವ ಸೋಮೇಶ್ವರದ ಸೋಮನಾಥೇಶ್ವರ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.
ಮಂಗಳೂರು (ಉಳ್ಳಾಲ) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್, ರವೀಂದ್ರ ಶೆಟ್ಟಿ ಉಳಿದೊಟ್ಟು, ದೇವಸ್ಥಾನದ ಆಡಳಿತ ಮೊಕ್ತೇಸರ ರವೀಂದ್ರನಾಥ ರೈ, ಧನಲಕ್ಷ್ಮೀ ಗಟ್ಟಿ ಸೇರಿದಂತೆ ಹಲವು ಮುಖಂಡರು ಜೊತೆಯಲ್ಲಿದ್ದರು.