<p><strong>ಉಳ್ಳಾಲ:</strong> ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅರಬ್ಬೀ ಸಮುದ್ರದ ಕಿನಾರೆಯಲ್ಲಿರುವ ಸೋಮೇಶ್ವರದ ಸೋಮನಾಥೇಶ್ವರ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.<br /><br />ಮಂಗಳೂರು (ಉಳ್ಳಾಲ) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್, ರವೀಂದ್ರ ಶೆಟ್ಟಿ ಉಳಿದೊಟ್ಟು, ದೇವಸ್ಥಾನದ ಆಡಳಿತ ಮೊಕ್ತೇಸರ ರವೀಂದ್ರನಾಥ ರೈ, ಧನಲಕ್ಷ್ಮೀ ಗಟ್ಟಿ ಸೇರಿದಂತೆ ಹಲವು ಮುಖಂಡರು ಜೊತೆಯಲ್ಲಿದ್ದರು.</p>.<p><strong>ಕಾನ್ಸ್ಟೆಬಲ್ಗೆ ಗಾಯ:</strong> ಬೊಮ್ಮಾಯಿ ಅವರು ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬಂದೋಬಸ್ತ್ಗಾಗಿ ನಿಯೋಜನೆಗೊಂಡಿದ್ದ ಕಂಕನಾಡಿ ಸಂಚಾರ ಠಾಣೆ ಪೊಲೀಸ್ ಕಾನ್ಸ್ಟೆಬಲ್ ಮಂಜುನಾಥ ಹೆಗಡೆ ಅವರಿಗೆ ಆಡಂಕುದ್ರು ಬಳಿ ಟೆಂಪೊ ಡಿಕ್ಕಿ ಹೊಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದದಾರೆ. </p>.<p>ಮುಖ್ಯಮಂತ್ರಿ ಭೇಟಿಗೂ ಮುನ್ನ ಅವರು ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ತಲಪಾಡಿ ಕಡೆಗೆ ತೆರಳುತ್ತಿದ್ದ ಟೆಂಪೊ ಚಾಲಕನ ನಿಯಂತ್ರಣ ಕಳೆದು ಅವರಿಗೆ ಡಿಕ್ಕಿ ಹೊಡೆಯಿತು. ಅವರ ತಲೆ ಹಾಗು ಕೈಗಳಿಗೆ ಗಾಯಗಳಾಗಿವೆ. ಅವರನ್ನು ಪಂಪ್ವೆಲ್ನ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ:</strong> ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅರಬ್ಬೀ ಸಮುದ್ರದ ಕಿನಾರೆಯಲ್ಲಿರುವ ಸೋಮೇಶ್ವರದ ಸೋಮನಾಥೇಶ್ವರ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.<br /><br />ಮಂಗಳೂರು (ಉಳ್ಳಾಲ) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್, ರವೀಂದ್ರ ಶೆಟ್ಟಿ ಉಳಿದೊಟ್ಟು, ದೇವಸ್ಥಾನದ ಆಡಳಿತ ಮೊಕ್ತೇಸರ ರವೀಂದ್ರನಾಥ ರೈ, ಧನಲಕ್ಷ್ಮೀ ಗಟ್ಟಿ ಸೇರಿದಂತೆ ಹಲವು ಮುಖಂಡರು ಜೊತೆಯಲ್ಲಿದ್ದರು.</p>.<p><strong>ಕಾನ್ಸ್ಟೆಬಲ್ಗೆ ಗಾಯ:</strong> ಬೊಮ್ಮಾಯಿ ಅವರು ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬಂದೋಬಸ್ತ್ಗಾಗಿ ನಿಯೋಜನೆಗೊಂಡಿದ್ದ ಕಂಕನಾಡಿ ಸಂಚಾರ ಠಾಣೆ ಪೊಲೀಸ್ ಕಾನ್ಸ್ಟೆಬಲ್ ಮಂಜುನಾಥ ಹೆಗಡೆ ಅವರಿಗೆ ಆಡಂಕುದ್ರು ಬಳಿ ಟೆಂಪೊ ಡಿಕ್ಕಿ ಹೊಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದದಾರೆ. </p>.<p>ಮುಖ್ಯಮಂತ್ರಿ ಭೇಟಿಗೂ ಮುನ್ನ ಅವರು ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ತಲಪಾಡಿ ಕಡೆಗೆ ತೆರಳುತ್ತಿದ್ದ ಟೆಂಪೊ ಚಾಲಕನ ನಿಯಂತ್ರಣ ಕಳೆದು ಅವರಿಗೆ ಡಿಕ್ಕಿ ಹೊಡೆಯಿತು. ಅವರ ತಲೆ ಹಾಗು ಕೈಗಳಿಗೆ ಗಾಯಗಳಾಗಿವೆ. ಅವರನ್ನು ಪಂಪ್ವೆಲ್ನ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>