<p><strong>ಮಂಗಳೂರು</strong>: ಬಜೆಟ್ ಲೆಕ್ಕಾಚಾರದ ಕುರಿತು ವಿಧಾನ ಮಂಡಲ ಸದಸ್ಯರಿಗೆ ಇದೇ 9 ರಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ಹೋಟೆಲ್ನಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. 17 ಸಲ ಬಜೆಟ್ ಮಂಡಿಸಿ ಅನುಭವ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ ಎಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು.</p><p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, 'ಅನೇಕ ಶಾಸಕರಿಗೆ ಬಜೆಟ್ಗೆ ಸಂಪನ್ಮೂಲ ಕ್ರೋಢೀಕರಿಸುವುದು ಹೇಗೆ, ಹಣಕಾಸಿನ ವರ್ಗೀಕರಣ ಹೇಗೆ, ವಿತ್ತೀಯ ಹೊಣೆಗಾರಿಕೆ, ವಿತ್ತೀಯ ಕೊರತೆ ಎಂದರೇನು ಎಂಬ ಕುರಿತ ಸಂಪೂರ್ಣ ತಿಳಿವಳಿಕೆ ಇರುವುದಿಲ್ಲ. ನಾನು ಶಾಸಕನಾದಾಗ ಈ ಬಗ್ಗೆ ಗೊತ್ತಿರಲಿಲ್ಲ. ಈ ಕಾರ್ಯಾಗಾರದಿಂದ ಅವರು ಬಜೆಟ್ ಕುರಿತ ಚರ್ಚೆಯಲ್ಲಿ ಸಮರ್ಥವಾಗಿ ಭಾಗವಹಿಸಲು ಸಾಧ್ಯವಾಗಲಿದೆ ಎಂದರು.</p><p>'ಇವತ್ತಿನ ಶಾಸಕರು ಭವಿಷ್ಯದಲ್ಲಿ ಹಣಕಾಸು ಸಚಿವರಾಗಬಹುದು. ಮುಖ್ಯಮಂತ್ರಿಯೂ ಆಗಬಹುದು. ಅವರು ಉತ್ತಮ ಸಂಸದೀಯ ಪಟುಗಳಾಗಿ ರೂಪುಗೊಳ್ಳಬೇಕು ಎಂಬ ಕಾರಣಕ್ಕೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ನಾನು ಚರ್ಚಿಸಿಯೇ ವಿಧಾನ ಮಂಡಲ ಸದಸ್ಯರಿಗಾಗಿ ಈ ಕಾರ್ಯಾಗಾರ ಹಮ್ಮಿಕೊಳ್ಳುವ ನಿರ್ಧಾರ ಕೈಗೊಂಡಿದ್ದೇವೆ. ಸೋಮವಾರ ಬಜೆಟ್ ಕಲಾಪದ ಬಳಿಕ ಸಂಜೆ 4 ರಿಂದ ವೇಳೆ ಕಾರ್ಯಾಗಾರ ನಡೆಯಲಿದೆ. ಬಜೆಟ್ ರೂಪಿಸುವ ಕುರಿತು ಉತ್ತಮ ಅನುಭವ ಹೊಂದಿರುವ ಕೆಲವು ಅಧಿಕಾರಿಗಳು, ನಿವೃತ್ತ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಣಕಾಸು ತಜ್ಞರು ಕೂಡ ಭಾಗವಹಿಸಲಿದ್ದಾರೆ. ಕಾರ್ಯಾಗಾರದಲ್ಲಿ ಭಾಗವಹಿಸುವಂತೆ ಎಲ್ಲ ಶಾಸಕರಿಗೆ ತಿಳಿಸಿದ್ದೇವೆ ಎಂದರು.</p><p>ರಾಜ್ಯದ 2026-27ನೇ ಸಾಲಿನ ಬಜೆಟ್ ಕುರಿತು ಅಭಿಪ್ರಾಯ ಹಂಚಿಕೊಳ್ಳಲು ಖಾದರ್ ನಿರಾಕರಿಸಿದರು. ಸಾಲದ ಪ್ರಮಾಣ ಹೆಚ್ಚಾಗಿದೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಅವರು, 'ಟೀಕೆಗಳು ಎಲ್ಲದಕ್ಕೂ ಬರುತ್ತವೆ. ಕೇಂದ್ರ ಬಜಟ್ ಕುರಿತೂ ಟೀಕೆಗಳು ಬಂದಿವೆ. ವಿಧಾನ ಸಭಾಧ್ಯಕ್ಷನಾಗಿ ಈ ಬಗ್ಗೆ ನಾನು ಹೇಳಿಕೆ ನೀಡುವುದು ಸರಿಯಾಗದು. ರಾಜ್ಯ ಸರ್ಕಾರದ ಬಜೆಟ್ ಕುರಿತು ವಿಧಾನಸಭೆಯಲ್ಲಿ ಅರ್ಥಪೂರ್ಣ ಚರ್ಚೆ ನಡೆಸುವಂತೆ ನೋಡಿಕೊಳ್ಳುವುದು ನನ್ನ ಜವಾಬ್ದಾರಿ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಬಜೆಟ್ ಲೆಕ್ಕಾಚಾರದ ಕುರಿತು ವಿಧಾನ ಮಂಡಲ ಸದಸ್ಯರಿಗೆ ಇದೇ 9 ರಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ಹೋಟೆಲ್ನಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. 17 ಸಲ ಬಜೆಟ್ ಮಂಡಿಸಿ ಅನುಭವ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ ಎಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು.</p><p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, 'ಅನೇಕ ಶಾಸಕರಿಗೆ ಬಜೆಟ್ಗೆ ಸಂಪನ್ಮೂಲ ಕ್ರೋಢೀಕರಿಸುವುದು ಹೇಗೆ, ಹಣಕಾಸಿನ ವರ್ಗೀಕರಣ ಹೇಗೆ, ವಿತ್ತೀಯ ಹೊಣೆಗಾರಿಕೆ, ವಿತ್ತೀಯ ಕೊರತೆ ಎಂದರೇನು ಎಂಬ ಕುರಿತ ಸಂಪೂರ್ಣ ತಿಳಿವಳಿಕೆ ಇರುವುದಿಲ್ಲ. ನಾನು ಶಾಸಕನಾದಾಗ ಈ ಬಗ್ಗೆ ಗೊತ್ತಿರಲಿಲ್ಲ. ಈ ಕಾರ್ಯಾಗಾರದಿಂದ ಅವರು ಬಜೆಟ್ ಕುರಿತ ಚರ್ಚೆಯಲ್ಲಿ ಸಮರ್ಥವಾಗಿ ಭಾಗವಹಿಸಲು ಸಾಧ್ಯವಾಗಲಿದೆ ಎಂದರು.</p><p>'ಇವತ್ತಿನ ಶಾಸಕರು ಭವಿಷ್ಯದಲ್ಲಿ ಹಣಕಾಸು ಸಚಿವರಾಗಬಹುದು. ಮುಖ್ಯಮಂತ್ರಿಯೂ ಆಗಬಹುದು. ಅವರು ಉತ್ತಮ ಸಂಸದೀಯ ಪಟುಗಳಾಗಿ ರೂಪುಗೊಳ್ಳಬೇಕು ಎಂಬ ಕಾರಣಕ್ಕೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ನಾನು ಚರ್ಚಿಸಿಯೇ ವಿಧಾನ ಮಂಡಲ ಸದಸ್ಯರಿಗಾಗಿ ಈ ಕಾರ್ಯಾಗಾರ ಹಮ್ಮಿಕೊಳ್ಳುವ ನಿರ್ಧಾರ ಕೈಗೊಂಡಿದ್ದೇವೆ. ಸೋಮವಾರ ಬಜೆಟ್ ಕಲಾಪದ ಬಳಿಕ ಸಂಜೆ 4 ರಿಂದ ವೇಳೆ ಕಾರ್ಯಾಗಾರ ನಡೆಯಲಿದೆ. ಬಜೆಟ್ ರೂಪಿಸುವ ಕುರಿತು ಉತ್ತಮ ಅನುಭವ ಹೊಂದಿರುವ ಕೆಲವು ಅಧಿಕಾರಿಗಳು, ನಿವೃತ್ತ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಣಕಾಸು ತಜ್ಞರು ಕೂಡ ಭಾಗವಹಿಸಲಿದ್ದಾರೆ. ಕಾರ್ಯಾಗಾರದಲ್ಲಿ ಭಾಗವಹಿಸುವಂತೆ ಎಲ್ಲ ಶಾಸಕರಿಗೆ ತಿಳಿಸಿದ್ದೇವೆ ಎಂದರು.</p><p>ರಾಜ್ಯದ 2026-27ನೇ ಸಾಲಿನ ಬಜೆಟ್ ಕುರಿತು ಅಭಿಪ್ರಾಯ ಹಂಚಿಕೊಳ್ಳಲು ಖಾದರ್ ನಿರಾಕರಿಸಿದರು. ಸಾಲದ ಪ್ರಮಾಣ ಹೆಚ್ಚಾಗಿದೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಅವರು, 'ಟೀಕೆಗಳು ಎಲ್ಲದಕ್ಕೂ ಬರುತ್ತವೆ. ಕೇಂದ್ರ ಬಜಟ್ ಕುರಿತೂ ಟೀಕೆಗಳು ಬಂದಿವೆ. ವಿಧಾನ ಸಭಾಧ್ಯಕ್ಷನಾಗಿ ಈ ಬಗ್ಗೆ ನಾನು ಹೇಳಿಕೆ ನೀಡುವುದು ಸರಿಯಾಗದು. ರಾಜ್ಯ ಸರ್ಕಾರದ ಬಜೆಟ್ ಕುರಿತು ವಿಧಾನಸಭೆಯಲ್ಲಿ ಅರ್ಥಪೂರ್ಣ ಚರ್ಚೆ ನಡೆಸುವಂತೆ ನೋಡಿಕೊಳ್ಳುವುದು ನನ್ನ ಜವಾಬ್ದಾರಿ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>