ಆಮ್ಲಜನಕ ಮತ್ತು ರೆಮ್ಡಿಸಿವಿರ್ ಲಭ್ಯತೆ ಬಗ್ಗೆ ಮುಖ್ಯಮಂತ್ರಿ ಪ್ರಶ್ನೆಗೆ ಉತ್ತರಿಸಿದ ಡಾ.ಶರತ್ ಬಾಬು, ‘ಜಿಲ್ಲೆಯಲ್ಲಿ ಇದುವರೆಗೆ ಆಮ್ಲಜನಕ ಕೊರತೆಯ ಗಂಭೀರ ಸಮಸ್ಯೆ ಕಂಡುಬಂದಿಲ್ಲ. ಪ್ರಸ್ತುತ 6ಸಾವಿರ ಲೀಟರ್ ಆಮ್ಲಜನಕದ ಸಂಗ್ರಹವಿದೆ. ಬಳ್ಳಾರಿಯಿಂದ ಪ್ರತಿ ಎರಡು ದಿನಕ್ಕೊಮ್ಮೆ ಆಮ್ಲಜನಕ ಬರುತ್ತಿದೆ. ಮುಂಜಾಗ್ರತೆಯಾಗಿ ಜಂಬೊ ಸಿಲೆಂಡರ್ಗಳಲ್ಲಿ ಆಮ್ಲಜನಕ ಸಂಗ್ರಹ ಮಾಡಿಟ್ಟುಕೊಳ್ಳಲಾಗಿದೆ. ರೆಮ್ಡಿಸಿವಿರ್ ಕೊರತೆಯಾಗಿಲ್ಲ. ಜಿಲ್ಲಾಡಳಿತದ ಆದೇಶದಂತೆ ರೆಮ್ಡಿಸಿವಿರ್ ಅನ್ನು ಜಿಲ್ಲಾ ತಜ್ಞರ ಸಮಿತಿ ಮಾರ್ಗಸೂಚಿ ಪ್ರಕಾರ ವಿವೇಚನೆಗೊಳಪಟ್ಟು, ಬಳಸಲಾಗುತ್ತಿದೆ’ ಎಂದರು.