<p><strong>ಮಂಗಳೂರು</strong>: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏ.27ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.<br /><br />ಅಂದು ಬೆಳಿಗ್ಗೆ 11.30ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಅವರು ಮಧ್ಯಾಹ್ನ 12 ಗಂಟೆಗೆ ಮೂಡುಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ನೂತನ ಅನ್ನದಾಸೋಹ ಕಟ್ಟಡ ಉದ್ಘಾಟಿಸುವರು. 12.30ಕ್ಕೆ ಜೈನ ಬಸದಿಗೆ ಭೇಟಿ ನೀಡುವರು. 1 ಗಂಟೆಗೆ ಮೂಡುಬಿದಿರೆ ಪ್ರೆಸ್ಕ್ಲಬ್ ಆವರಣದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವರು.</p>.<p>ಮಧ್ಯಾಹ್ನ 3ಗಂಟೆಗೆ ಆಡಳಿತ ಸೌಧದ ಮುಂಭಾಗದಲ್ಲಿ ಮೂಲ್ಕಿ- ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗುವರು. ಸಂಜೆ 6 ಗಂಟೆಗೆ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.</p>.<p class="Briefhead"><strong>ವಸತಿ ಸಚಿವರ ಪ್ರವಾಸ ನಾಳೆ</strong></p>.<p>ಮಂಗಳೂರು: ರಾಜ್ಯದ ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಏ.27 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಮೂಡುಬಿದಿರೆಯ ಪಕ್ಷದ ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮೂಲ್ಕಿ-ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.</p>.<p class="Briefhead"><strong>ಆಕ್ಷೇಪಣೆಗಳಿಗೆ ಆಹ್ವಾನ</strong></p>.<p><strong>ಮಂಗಳೂರು</strong>: ಉಪನೋಂದಣಾಧಿಕಾರಿ ಮಂಗಳೂರು ತಾಲ್ಲೂಕು ಕಚೇರಿ ವ್ಯಾಪ್ತಿಗೆ ಬರುವ ಸ್ಥಿರಾಸ್ತಿಗಳ ಮಾರುಕಟ್ಟೆ ಮಾರ್ಗಸೂಚಿ ದರಪಟ್ಟಿಯಲ್ಲಿ ಈಗಾಗಲೇ ನಮೂದಿಸದ ಹೊಸ ಹಾಗೂ ಹಳೆಯ ಬಿಟ್ಟು ಹೋದ ಅಪಾರ್ಟ್ಮೆಂಟ್ಗಳ ಮಾರುಕಟ್ಟೆ ಮೌಲ್ಯವನ್ನು ಗುರುತಿಸಿ ಸಂಬಂಧಪಟ್ಟ ಕಚೇರಿಯಲ್ಲಿ ಪ್ರಕಟಿಸಲಾಗಿದೆ.</p>.<p>ಯಾವುದೇ ಆಕ್ಷೇಪಣೆಗಳಿದ್ದಲ್ಲಿ ದಾಖಲಾತಿಗಳೊಂದಿಗೆ 15 ದಿನದೊಳಗೆ ಆಕ್ಷೇಪಣೆಯನ್ನು ಉಪನೋಂದಣಾಧಿಕಾರಿ ಕಚೇರಿಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<p class="Briefhead"><strong>ಅರ್ಜಿ ಆಹ್ವಾನ</strong></p>.<p><strong>ಮಂಗಳೂರು</strong>: 2021-22ನೇ ಸಾಲಿನ ರೈತ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಅರ್ಹ ರೈತರ ಗುರುತಿನ ಸಂಖ್ಯೆ ಹೊಂದಿದ ಮಕ್ಕಳು ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಂಗಳೂರು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p class="Briefhead"><strong>ಕಚೇರಿ ವಿಳಾಸ ಬದಲಾವಣೆ</strong></p>.<p><strong>ಮಂಗಳೂರು</strong>: ಹಾಸನದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರದ ಕಚೇರಿ ವಿಳಾಸ ಬದಲಾಗಿದೆ. ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರ ಕಾರ್ಯಾಲಯ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಾಹೆ-75, ಹಾಸನ – ಇದು ಹೊಸ ವಿಳಾಸವಾಗಿದ್ದು, ಇನ್ನುಮುಂದೆ ಈ ಕಚೇರಿಗೆ ಪತ್ರಗಳನ್ನು ಕಳುಹಿಸಲು ಹಾಸನ-ಬಿ.ಸಿ.ರೋಡ್ ವಿಭಾಗದ ವಿಶೇಷ ಭೂಸ್ವಾಧೀನಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏ.27ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.<br /><br />ಅಂದು ಬೆಳಿಗ್ಗೆ 11.30ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಅವರು ಮಧ್ಯಾಹ್ನ 12 ಗಂಟೆಗೆ ಮೂಡುಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ನೂತನ ಅನ್ನದಾಸೋಹ ಕಟ್ಟಡ ಉದ್ಘಾಟಿಸುವರು. 12.30ಕ್ಕೆ ಜೈನ ಬಸದಿಗೆ ಭೇಟಿ ನೀಡುವರು. 1 ಗಂಟೆಗೆ ಮೂಡುಬಿದಿರೆ ಪ್ರೆಸ್ಕ್ಲಬ್ ಆವರಣದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವರು.</p>.<p>ಮಧ್ಯಾಹ್ನ 3ಗಂಟೆಗೆ ಆಡಳಿತ ಸೌಧದ ಮುಂಭಾಗದಲ್ಲಿ ಮೂಲ್ಕಿ- ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗುವರು. ಸಂಜೆ 6 ಗಂಟೆಗೆ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.</p>.<p class="Briefhead"><strong>ವಸತಿ ಸಚಿವರ ಪ್ರವಾಸ ನಾಳೆ</strong></p>.<p>ಮಂಗಳೂರು: ರಾಜ್ಯದ ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಏ.27 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಮೂಡುಬಿದಿರೆಯ ಪಕ್ಷದ ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮೂಲ್ಕಿ-ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.</p>.<p class="Briefhead"><strong>ಆಕ್ಷೇಪಣೆಗಳಿಗೆ ಆಹ್ವಾನ</strong></p>.<p><strong>ಮಂಗಳೂರು</strong>: ಉಪನೋಂದಣಾಧಿಕಾರಿ ಮಂಗಳೂರು ತಾಲ್ಲೂಕು ಕಚೇರಿ ವ್ಯಾಪ್ತಿಗೆ ಬರುವ ಸ್ಥಿರಾಸ್ತಿಗಳ ಮಾರುಕಟ್ಟೆ ಮಾರ್ಗಸೂಚಿ ದರಪಟ್ಟಿಯಲ್ಲಿ ಈಗಾಗಲೇ ನಮೂದಿಸದ ಹೊಸ ಹಾಗೂ ಹಳೆಯ ಬಿಟ್ಟು ಹೋದ ಅಪಾರ್ಟ್ಮೆಂಟ್ಗಳ ಮಾರುಕಟ್ಟೆ ಮೌಲ್ಯವನ್ನು ಗುರುತಿಸಿ ಸಂಬಂಧಪಟ್ಟ ಕಚೇರಿಯಲ್ಲಿ ಪ್ರಕಟಿಸಲಾಗಿದೆ.</p>.<p>ಯಾವುದೇ ಆಕ್ಷೇಪಣೆಗಳಿದ್ದಲ್ಲಿ ದಾಖಲಾತಿಗಳೊಂದಿಗೆ 15 ದಿನದೊಳಗೆ ಆಕ್ಷೇಪಣೆಯನ್ನು ಉಪನೋಂದಣಾಧಿಕಾರಿ ಕಚೇರಿಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<p class="Briefhead"><strong>ಅರ್ಜಿ ಆಹ್ವಾನ</strong></p>.<p><strong>ಮಂಗಳೂರು</strong>: 2021-22ನೇ ಸಾಲಿನ ರೈತ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಅರ್ಹ ರೈತರ ಗುರುತಿನ ಸಂಖ್ಯೆ ಹೊಂದಿದ ಮಕ್ಕಳು ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಂಗಳೂರು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p class="Briefhead"><strong>ಕಚೇರಿ ವಿಳಾಸ ಬದಲಾವಣೆ</strong></p>.<p><strong>ಮಂಗಳೂರು</strong>: ಹಾಸನದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರದ ಕಚೇರಿ ವಿಳಾಸ ಬದಲಾಗಿದೆ. ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರ ಕಾರ್ಯಾಲಯ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಾಹೆ-75, ಹಾಸನ – ಇದು ಹೊಸ ವಿಳಾಸವಾಗಿದ್ದು, ಇನ್ನುಮುಂದೆ ಈ ಕಚೇರಿಗೆ ಪತ್ರಗಳನ್ನು ಕಳುಹಿಸಲು ಹಾಸನ-ಬಿ.ಸಿ.ರೋಡ್ ವಿಭಾಗದ ವಿಶೇಷ ಭೂಸ್ವಾಧೀನಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>