<p><strong>ಬಂಟ್ವಾಳ:</strong> ಬ್ರಹ್ಮಶ್ರೀ ನಾರಾಯಣಗುರುಗಳ ಆಶಯದಂತೆ ಶಿಕ್ಷಣದ ಜತೆಗೆ ಸಂಘಟನೆ ಮತ್ತು ಆರ್ಥಿಕವಾಗಿ ಬಲಾಢ್ಯರಾಗಲು ಸಹಕಾರ ತತ್ವ ಬುನಾದಿಯಾಗಿದೆ ಎಂದು ಸೋಲೂರು ಮಠದ ಆರ್ಯ ಈಡಿಗ ಸಂಸ್ಥಾನದ ತೀರ್ಥಾಧಿಪತಿ, ಹೊಸ್ಮಾರು ಬಲ್ಯೊಟ್ಟು ಶ್ರೀಗುರುಕೃಪಾ ಸೇವಾಶ್ರಮದ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಬಿ.ಸಿ.ರೋಡಿನಲ್ಲಿ ಭಾನುವಾರ ಆರಂಭಗೊಂಡ ಸಜಿಪಮುನ್ನೂರು ಸೇವಾ ಸಹಕಾರ ಸಂಘದ 14ನೇ ಶಾಖೆಯನ್ನು ಉದ್ಘಾಟಿಸಿ ಆವರು ಆಶೀರ್ವಚನ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಮಾತನಾಡಿ, ‘ಬಡವರಿಗೆ ಸಾಲ ಸೌಲಭ್ಯ ಸರಳವಾಗಿ ಸಿಗಬೇಕು ಎಂಬ ಆಶಯದೊಂದಿಗೆ ಆರಂಭಗೊಂಡ ಸಂಘವು ಸಂಪೂರ್ಣ ಮಹಿಳಾ ಸಿಬ್ಬಂದಿಯ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ. ಶೀಘ್ರವೇ ವೇಣೂರು ಶಾಖೆ ಆರಂಭಿಸಲಾಗುವುದು ಎಂದರು.</p>.<p>ಬಿ.ಸಿ.ರೋಡು ಶ್ರೀ ಅನ್ನಪೂರ್ಣೇಶ್ವರಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಸೇಫ್ ಲಾಕರ್ ಉದ್ಘಾಟಿಸಿದರು. ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಷನ್ ಡಿಸೋಜ ಕಂಪ್ಯೂಟರ್ ವ್ಯವಸ್ಥೆ ಉದ್ಘಾಟಿಸಿದರು.</p>.<p>ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಜಿಲ್ಲೆಯಲ್ಲಿ ಸಹಕಾರ ಸಂಘಗಳು ಪೈಪೋಟಿ ನೀಡಿ ರಾಷ್ಟ್ರೀಕೃತ ಬ್ಯಾಂಕುಗಳ ದಿಕ್ಕು ಬದಲಿಸಿವೆ ಎಂದರು.</p>.<p>ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಬಿ.ಸಂಜೀವ ಪೂಜಾರಿ ಗುರುಕೃಪಾ, ರಕ್ತೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಬಿ.ವಿಶ್ವನಾಥ ಪೂಜಾರಿ, ಬೂಡಾ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿದರು.</p>.<p>ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ಬೀಡಿನಪಾಲು, ನಿರ್ದೇಶಕರಾದ ರಮೇಶ್ ಅನ್ನಪ್ಪಾಡಿ, ವಿಠಲ ಬೆಳ್ಚಾಡ ಚೇಳೂರು, ಅಶೋಕ್ ಪೂಜಾರಿ ಕೋಮಾಲಿ, ಗಿರೀಶ್ ಕುಮಾರ್ ಪೆರ್ವ, ಜಯಶಂಕರ ಕಾನ್ಸಾಲೆ, ಕೆ.ಸುಜಾತಾ ಎಂ., ವಾಣಿ ವಸಂತ, ಅರುಣ್ ಕುಮಾರ್ ಎಂ., ಆಶಿಶ್ ಪೂಜಾರಿ ಭಾಗವಹಿಸಿದ್ದರು.</p>.<p>ಸಿಇಒ ಮಮತಾ ಜಿ.ಸ್ವಾಗತಿಸಿ, ಸುಚಿತ್ರಾ ಪ್ರಾರ್ಥಿಸಿದರು. ವಿಜಯಾ ಕೆ.ವಂದಿಸಿದರು. ದಿನೇಶ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ ಠೇವಣಿ ಪತ್ರ, ಉಳಿತಾಯ ಖಾತೆ ಪತ್ರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ:</strong> ಬ್ರಹ್ಮಶ್ರೀ ನಾರಾಯಣಗುರುಗಳ ಆಶಯದಂತೆ ಶಿಕ್ಷಣದ ಜತೆಗೆ ಸಂಘಟನೆ ಮತ್ತು ಆರ್ಥಿಕವಾಗಿ ಬಲಾಢ್ಯರಾಗಲು ಸಹಕಾರ ತತ್ವ ಬುನಾದಿಯಾಗಿದೆ ಎಂದು ಸೋಲೂರು ಮಠದ ಆರ್ಯ ಈಡಿಗ ಸಂಸ್ಥಾನದ ತೀರ್ಥಾಧಿಪತಿ, ಹೊಸ್ಮಾರು ಬಲ್ಯೊಟ್ಟು ಶ್ರೀಗುರುಕೃಪಾ ಸೇವಾಶ್ರಮದ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಬಿ.ಸಿ.ರೋಡಿನಲ್ಲಿ ಭಾನುವಾರ ಆರಂಭಗೊಂಡ ಸಜಿಪಮುನ್ನೂರು ಸೇವಾ ಸಹಕಾರ ಸಂಘದ 14ನೇ ಶಾಖೆಯನ್ನು ಉದ್ಘಾಟಿಸಿ ಆವರು ಆಶೀರ್ವಚನ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಮಾತನಾಡಿ, ‘ಬಡವರಿಗೆ ಸಾಲ ಸೌಲಭ್ಯ ಸರಳವಾಗಿ ಸಿಗಬೇಕು ಎಂಬ ಆಶಯದೊಂದಿಗೆ ಆರಂಭಗೊಂಡ ಸಂಘವು ಸಂಪೂರ್ಣ ಮಹಿಳಾ ಸಿಬ್ಬಂದಿಯ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ. ಶೀಘ್ರವೇ ವೇಣೂರು ಶಾಖೆ ಆರಂಭಿಸಲಾಗುವುದು ಎಂದರು.</p>.<p>ಬಿ.ಸಿ.ರೋಡು ಶ್ರೀ ಅನ್ನಪೂರ್ಣೇಶ್ವರಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಸೇಫ್ ಲಾಕರ್ ಉದ್ಘಾಟಿಸಿದರು. ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಷನ್ ಡಿಸೋಜ ಕಂಪ್ಯೂಟರ್ ವ್ಯವಸ್ಥೆ ಉದ್ಘಾಟಿಸಿದರು.</p>.<p>ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಜಿಲ್ಲೆಯಲ್ಲಿ ಸಹಕಾರ ಸಂಘಗಳು ಪೈಪೋಟಿ ನೀಡಿ ರಾಷ್ಟ್ರೀಕೃತ ಬ್ಯಾಂಕುಗಳ ದಿಕ್ಕು ಬದಲಿಸಿವೆ ಎಂದರು.</p>.<p>ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಬಿ.ಸಂಜೀವ ಪೂಜಾರಿ ಗುರುಕೃಪಾ, ರಕ್ತೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಬಿ.ವಿಶ್ವನಾಥ ಪೂಜಾರಿ, ಬೂಡಾ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿದರು.</p>.<p>ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ಬೀಡಿನಪಾಲು, ನಿರ್ದೇಶಕರಾದ ರಮೇಶ್ ಅನ್ನಪ್ಪಾಡಿ, ವಿಠಲ ಬೆಳ್ಚಾಡ ಚೇಳೂರು, ಅಶೋಕ್ ಪೂಜಾರಿ ಕೋಮಾಲಿ, ಗಿರೀಶ್ ಕುಮಾರ್ ಪೆರ್ವ, ಜಯಶಂಕರ ಕಾನ್ಸಾಲೆ, ಕೆ.ಸುಜಾತಾ ಎಂ., ವಾಣಿ ವಸಂತ, ಅರುಣ್ ಕುಮಾರ್ ಎಂ., ಆಶಿಶ್ ಪೂಜಾರಿ ಭಾಗವಹಿಸಿದ್ದರು.</p>.<p>ಸಿಇಒ ಮಮತಾ ಜಿ.ಸ್ವಾಗತಿಸಿ, ಸುಚಿತ್ರಾ ಪ್ರಾರ್ಥಿಸಿದರು. ವಿಜಯಾ ಕೆ.ವಂದಿಸಿದರು. ದಿನೇಶ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ ಠೇವಣಿ ಪತ್ರ, ಉಳಿತಾಯ ಖಾತೆ ಪತ್ರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>