ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ನಿರ್ದೇಶಕ ತ್ರಯರಿಗೆ ಸನ್ಮಾನ

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ
Last Updated 22 ಜುಲೈ 2021, 3:43 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ನಿಕಟಪೂರ್ವ ನಿರ್ದೇಶಕರನ್ನು ಸನ್ಮಾನಿಸುವ ಕಾರ್ಯಕ್ರಮ ಸಂಘದ ಪ್ರಧಾನ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಎಸ್.ಜಗದೀಶ್ಚಂದ್ರ ಅಂಚನ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.

ಕುಂದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜೀವ್ ಶೆಟ್ಟಿ ಕುಂದಾಪುರ, ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೃಷ್ಣ ಪ್ರಕಾಶ್ ಹಾಗೂ ಸ್ಕ್ಯಾಡ್ಸ್ ಸಂಸ್ಥೆಯ ಸಿಬ್ಬಂದಿ ಅರವಿಂದ್ ಶೆಟ್ಟಿ ಇವರು ಈಚೆಗೆ ತಮ್ಮ ಸಂಸ್ಥೆಗಳಲ್ಲಿ ವಯೋನಿವೃತ್ತಿ ಹೊಂದಿದ್ದು , ಈ ಮೂವರು ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ನಿಕಟಪೂರ್ವ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು ಎಂದು ಜಗದೀಶ್ಚಂದ್ರ ಅಂಚನ್ ಹೇಳಿದರು.

ಸನ್ಮಾನಿತರು ಮಾತನಾಡಿ ಸಂಘದ ನಿರ್ದೇಶಕರೆಲ್ಲರೂ, ಮುಖ್ಯಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿ, ಸರ್ವ ಸದಸ್ಯರ ಬೆಂಬಲ, ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್ ಮಾರ್ಗದರ್ಶನದಿಂದ ಸಂಘವು ಸ್ವಂತ ಕಟ್ಟಡವನ್ನು ಹೊಂದಲು ಸಾಧ್ಯವಾಯಿತು. ಇನ್ನಷ್ಟು ಅಭಿವೃದ್ದಿಯನ್ನು ಹೊಂದಲಿ ಎಂದರು.

ಸಂಘದ ಉಪಾಧ್ಯಕ್ಷ ದಿವಾಕರ ಶೆಟ್ಟಿ, ನಿರ್ದೇಶಕರಾದ ಪುಷ್ಪರಾಜ್ ಎಂ.ಎಸ್. ರಾಘವ ಆರ್ . ಉಚ್ಚಿಲ್, ಶುಭಲಕ್ಷ್ಮಿ ವಿ.ರೈ, ವಿಶ್ವೇಶ್ವರ ಐತಾಳ, ವಿಶ್ವನಾಥ ಕೆ ಟಿ, ಅರುಣ್ ಕುಮಾರ್, ಗಿರಿಧರ್, ಮೋಹನ್ ಎನ್., ಗೀತಾಕ್ಷಿ, ವಿಶ್ವನಾಥ್ ಎನ್. ಅಮೀನ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT