ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೌಕ್ತೆ‌ ಚಂಡಮಾರುತದ ಆತಂಕ: ಮೀನುಗಾರರಿಗೆ ಎಚ್ಚರಿಕೆ

Last Updated 14 ಮೇ 2021, 12:56 IST
ಅಕ್ಷರ ಗಾತ್ರ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತೌಕ್ತೆ ಚಂಡಮಾರುತ ಆತಂಕ ಉಂಟಾಗಿದೆ. ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ.

ಕರಾವಳಿಯ ಸಮುದ್ರ ತೀರಗಳಲ್ಲಿ ಕಡಲ್ಕೊರೆತ ಆರಂಭವಾಗಿದೆ. ಅಲೆಗಳು ಜೋರಾಗಿ ಅಪ್ಪಳಿಸುತ್ತಿದ್ದು, ನೂರಾರು ತೆಂಗಿನ ಮರಗಳು ಸಮುದ್ರ ಪಾಲಾಗಿವೆ.

ಮೇ 16ರಂದು ಪೂರ್ವ ಮಧ್ಯ ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯಾಗಿ ತೀವ್ರವಾಗಲಿದೆ. ಈ ಎಚ್ಚರಿಕೆ ಹಿನ್ನೆಲೆಯಲ್ಲಿ ಭಾರತೀಯ ಮೀನುಗಾರಿಕೆ ದೋಣಿಗಳು ಮೀನುಗಾರಿಕೆಗೆ ಇಳಿಯದಂತೆ ಕರಾವಳಿ‌ ಕಾವಲು ಪಡೆ ಸೂಚನೆ ನೀಡಿದೆ.

ಗಸ್ತು ತಿರುಗುತ್ತಿರುವ ಕಾವಲು ಪಡೆಯ ಹಡಗುಗಳು ಮತ್ತು ವಿಮಾನಗಳ ಮೂಲಕ ಸಮುದ್ರದಲ್ಲಿರುವ ಮೀನುಗಾರರಿಗೆ ಹವಾಮಾನ ಎಚ್ಚರಿಕೆ ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT