ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತೌಕ್ತೆ ಚಂಡಮಾರುತ ಆತಂಕ ಉಂಟಾಗಿದೆ. ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ.
ಕರಾವಳಿಯ ಸಮುದ್ರ ತೀರಗಳಲ್ಲಿ ಕಡಲ್ಕೊರೆತ ಆರಂಭವಾಗಿದೆ. ಅಲೆಗಳು ಜೋರಾಗಿ ಅಪ್ಪಳಿಸುತ್ತಿದ್ದು, ನೂರಾರು ತೆಂಗಿನ ಮರಗಳು ಸಮುದ್ರ ಪಾಲಾಗಿವೆ.
ಮೇ 16ರಂದು ಪೂರ್ವ ಮಧ್ಯ ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯಾಗಿ ತೀವ್ರವಾಗಲಿದೆ. ಈ ಎಚ್ಚರಿಕೆ ಹಿನ್ನೆಲೆಯಲ್ಲಿ ಭಾರತೀಯ ಮೀನುಗಾರಿಕೆ ದೋಣಿಗಳು ಮೀನುಗಾರಿಕೆಗೆ ಇಳಿಯದಂತೆ ಕರಾವಳಿ ಕಾವಲು ಪಡೆ ಸೂಚನೆ ನೀಡಿದೆ.
ಗಸ್ತು ತಿರುಗುತ್ತಿರುವ ಕಾವಲು ಪಡೆಯ ಹಡಗುಗಳು ಮತ್ತು ವಿಮಾನಗಳ ಮೂಲಕ ಸಮುದ್ರದಲ್ಲಿರುವ ಮೀನುಗಾರರಿಗೆ ಹವಾಮಾನ ಎಚ್ಚರಿಕೆ ನೀಡಲಾಗುತ್ತಿದೆ.