‘ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನದ ವೇಳೆ ಪ್ರತಿ ಮನೆಗೆ ಭೇಟಿ ನೀಡಿ, ಜನರನ್ನು ನೇರವಾಗಿ ತಲುಪುತ್ತಿದ್ದೇವೆ. ಇದು ಚುನಾವಣೆಯ ವೇಳೆ ಪಕ್ಷದ ಮೇಲೆ ಪೂರಕವಾಗಿ ಪರಿಣಾಮ ಬೀರುವ ವಿಶ್ವಾಸವಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ಕುಮಾರ್, ಮಾಜಿ ಶಾಸಕ ಜೆ.ಆರ್.ಲೋಬೊ, ಕಾಂಗ್ರೆಸ್ ಪ್ರಮುಖರಾದ ಶಶಿಧರ ಹೆಗ್ದೆ, ಟಿ.ಕೆ. ಸುಧೀರ್, ಪ್ರಕಾಶ ಸಾಲ್ಯಾನ್, ಶುಭೋದಯ ಆಳ್ವ, ಪಕ್ಷದ ಜಿಲ್ಲಾ ಚುನಾವಣಾಧಿಕಾರಿ ಜಯಚಂದ್ರನ್ ಇದ್ದರು.