ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪುತ್ತೂರಿನಲ್ಲಿ ಆಗಸ್ಟ್ 15ರಂದು ನಡೆದ ರಥ ಯಾತ್ರೆಗೆ ಅಡ್ಡಿಪಡಿಸಿದ ಪ್ರಕರಣ, ಉಳ್ಳಾಲದ ಕುಟುಂಬವೊಂದಕ್ಕೆ ಐಸಿಸ್ ನಂಟು, ಸ್ಯಾಟ್ಲೈಟ್ ಕರೆಯಂತಹ ಘಟನೆಗಳು ನಡೆಯುತ್ತಿವೆ. ಇಂತಹ ಘಟನೆಗಳ ಹಿಂದೆ ಯಾವುದೋ ಕಾಣದ ಶಕ್ತಿಗಳ ಕೈವಾಡ ಇರುವ ಶಂಕೆ ಇದ್ದು, ಈ ಬಗ್ಗೆ ಸಮಗ್ರ ತನಿಖೆಯಾದಾಗ ಮಾತ್ರ ಸತ್ಯಾಂಶ ಹೊರ ಬರುತ್ತದೆ’ ಎಂದು ಹೇಳಿದರು.