<p><strong>ಮಂಗಳೂರು</strong>: ಸ್ಯಾಂಡಿಸ್ ಕಂಪನಿ ಅರ್ಪಿಸುವ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಮ್ ಅವಾರ್ಡ್ 2025 ಕಾರ್ಯಕ್ರಮವು ಜೂ.22ರಂದು ಮಧ್ಯಾಹ್ನ 3 ಗಂಟೆಗೆ ಮೂಲ್ಕಿ ಕೊಳ್ನಾಡ್ ಸುಂದರರಾಮ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಆಯೋಜಕ ಸಂದೇಶ್ ರಾಜ್ ಬಂಗೇರ ಹೇಳಿದರು.</p>.<p>ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 2024 ಜನವರಿಯಿಂದ ಡಿಸೆಂಬರ್ವರೆಗೆ ತೆರೆ ಕಂಡಿರುವ ಒಟ್ಟು ಎಂಟು ಸಿನಿಮಾಗಳು ಸ್ಪರ್ಧೆಗೆ ಬಂದಿವೆ. ಜೀವಮಾನ ಸಾಧನೆ, ಬಹುಮುಖಿ ನಟ ಸೇರಿದಂತೆ 30 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ ಎಂದರು.</p>.<p>ಅತಿಥಿಗಳಾಗಿ ಸಂಗೀತ ನಿರ್ದೇಶಕ ಗುರುಕಿರಣ್, ಕನ್ನಡ ಸಿನಿಮಾ ತಾರೆಯರಾದ ರಚನಾ ರೈ, ವೃಂದಾ ಆಚಾರ್ಯ, ರೂಪೇಶ್ ಶೆಟ್ಟಿ, ಪೃಥ್ವಿ ಅಂಬರ್, ಸೋನಲ್ ಮೊಂತೆರೊ ಹಾಗೂ ತುಳು ಚಿತ್ರರಂಗದ ನಿರ್ಮಾಪಕರು, ತಂತ್ರಜ್ಞರು, ನಟ– ನಟಿಯರು ಭಾಗವಹಿಸಲಿದ್ದಾರೆ. ತುಳು ಚಿತ್ರರಂಗದ ನಟ, ನಟಿಯರಿಂದ ಮತ್ತು ಸಿಸಿಲಿಂಗ್ ಗಾಯ್ಸ್ ತಂಡದಿಂದ ನೃತ್ಯ, ರಸಮಂಜರಿ ಹಾಗೂ ಕಾಮಿಡಿ ಕಾರ್ಯಕ್ರಮ ನಡೆಯಲಿದೆ. ಶರ್ಮಿಳಾ ಅಮೀನ್ ಮತ್ತು ವಿನೀತ್ ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ. ಇಬ್ಬರು ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.</p>.<p>ಯಶ್ರಾಜ್, ಉದಯ ಬಳ್ಳಾಲ್, ಪ್ರೀತಮ್, ಸಾತ್ವಿಕ್ ಪೂಜಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಸ್ಯಾಂಡಿಸ್ ಕಂಪನಿ ಅರ್ಪಿಸುವ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಮ್ ಅವಾರ್ಡ್ 2025 ಕಾರ್ಯಕ್ರಮವು ಜೂ.22ರಂದು ಮಧ್ಯಾಹ್ನ 3 ಗಂಟೆಗೆ ಮೂಲ್ಕಿ ಕೊಳ್ನಾಡ್ ಸುಂದರರಾಮ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಆಯೋಜಕ ಸಂದೇಶ್ ರಾಜ್ ಬಂಗೇರ ಹೇಳಿದರು.</p>.<p>ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 2024 ಜನವರಿಯಿಂದ ಡಿಸೆಂಬರ್ವರೆಗೆ ತೆರೆ ಕಂಡಿರುವ ಒಟ್ಟು ಎಂಟು ಸಿನಿಮಾಗಳು ಸ್ಪರ್ಧೆಗೆ ಬಂದಿವೆ. ಜೀವಮಾನ ಸಾಧನೆ, ಬಹುಮುಖಿ ನಟ ಸೇರಿದಂತೆ 30 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ ಎಂದರು.</p>.<p>ಅತಿಥಿಗಳಾಗಿ ಸಂಗೀತ ನಿರ್ದೇಶಕ ಗುರುಕಿರಣ್, ಕನ್ನಡ ಸಿನಿಮಾ ತಾರೆಯರಾದ ರಚನಾ ರೈ, ವೃಂದಾ ಆಚಾರ್ಯ, ರೂಪೇಶ್ ಶೆಟ್ಟಿ, ಪೃಥ್ವಿ ಅಂಬರ್, ಸೋನಲ್ ಮೊಂತೆರೊ ಹಾಗೂ ತುಳು ಚಿತ್ರರಂಗದ ನಿರ್ಮಾಪಕರು, ತಂತ್ರಜ್ಞರು, ನಟ– ನಟಿಯರು ಭಾಗವಹಿಸಲಿದ್ದಾರೆ. ತುಳು ಚಿತ್ರರಂಗದ ನಟ, ನಟಿಯರಿಂದ ಮತ್ತು ಸಿಸಿಲಿಂಗ್ ಗಾಯ್ಸ್ ತಂಡದಿಂದ ನೃತ್ಯ, ರಸಮಂಜರಿ ಹಾಗೂ ಕಾಮಿಡಿ ಕಾರ್ಯಕ್ರಮ ನಡೆಯಲಿದೆ. ಶರ್ಮಿಳಾ ಅಮೀನ್ ಮತ್ತು ವಿನೀತ್ ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ. ಇಬ್ಬರು ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.</p>.<p>ಯಶ್ರಾಜ್, ಉದಯ ಬಳ್ಳಾಲ್, ಪ್ರೀತಮ್, ಸಾತ್ವಿಕ್ ಪೂಜಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>