ಮುಖ್ಯ ಅತಿಥಿಯಾಗಿದ್ದ ಮಂಗಳೂರು ವಿಶ್ವವಿದ್ಯಾಲಯ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಧನಂಜಯ ಕುಂಬ್ಳೆ ‘ತುಳು ಸಂಸ್ಕೃತಿಯಲ್ಲಿ ಹೆಚ್ಚು ಅಧ್ಯಯನಕ್ಕೆ ಒಳಗಾಗದ ವಿಷಯಗಳನ್ನು ರಾಜಶ್ರೀ ಅವರು ಅನ್ವೇಷಣೆಗಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಸಂಶೋಧನೆ, ಅನುವಾದ, ಅಂಕಣ ಬರಹ ಮುಂತಾದ ರೀತಿಯಲ್ಲಿ ತುಳು ಸಾಹಿತ್ಯ ಲೋಕಕ್ಕೆ ಅವರು ನೀಡುತ್ತಿರುವ ಕೊಡುಗೆ ವಿಶಿಷ್ಟ’ ಎಂದು ಹೇಳಿದರು.