<p><strong>ಮಂಗಳೂರು:</strong> ಕಂಕನಾಡಿಯ ಹೈರ್ ಗ್ಲೋ ಎಲೆಗಂಟ್ ಓವರ್ಸೀಸ್ ಇಂಟರ್ನ್ಯಾಷನಲ್ (ಒಪಿಸಿ) ಪ್ರೈವೇಟ್ ಲಿಮಿಟೆಡ್ ಸಂಸ್ಥೆಯುವ ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ವಿವಿಧ ಉದ್ಯೋಗಾಕಾಂಕ್ಷಿಗಳಿಗೆ ₹ 1.82 ಕೋಟಿ ವಂಚನೆ ಮಾಡಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>‘ವಿದೇಶದಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ಸಂಸ್ಥೆಯು ನನ್ನಿಂದ ₹ 1.65 ಲಕ್ಷ ಪಡೆದುಕೊಂಡಿತ್ತು. ಆದರೆ ನೀಡಿದ್ದ ಭರವಸೆಯಂತೆ ಉದ್ಯೋಗ ಕೊಡಿಸಿಲ್ಲ. ನನ್ನಂತೆಯೇ ಅನೇಕ ಉದ್ಯೋಗಾಂಕ್ಷಿಗಳಿಂದ ಹಣ ಪಡೆದುಕೊಂಡಿರುವ ಸಂಸ್ಥೆ ಅವರಿಗೂ ಇದೇ ರೀತಿ ವಂಚನೆ ಮಾಡಿದೆ. ಅಂದಾಜು ₹ 1.82 ಕೋಟಿ ಮೊತ್ತವನ್ನು ಸಂಸ್ಥೆ ಉದ್ಯೋಗಾಕಾಂಕ್ಷಿಗಳಿಂದ ಪಡೆದುಕೊಂಡಿದ್ದು, ಉದ್ಯೋಗವನ್ನೂ ಕೊಡಿಸದೇ, ಪಡೆದ ಹಣವನ್ನೂ ಮರಳಿಸದೇ ವಂಚಿಸಿದೆ’ ಎಂದು ಸಂತ್ರಸ್ತ ವ್ಯಕ್ತಿಯೊಬ್ಬರು ದೂರಿನಲ್ಲಿ ಆರೋಪಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ನಂಬಿಕೆ ದ್ರೋಹವೆಸಗಿರುವ ಸಂಸ್ಥೆಯ ಆಡಳಿತಾಧಿಕಾರಿ ಮತ್ತು ಉದ್ಯೋಗಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕಂಕನಾಡಿಯ ಹೈರ್ ಗ್ಲೋ ಎಲೆಗಂಟ್ ಓವರ್ಸೀಸ್ ಇಂಟರ್ನ್ಯಾಷನಲ್ (ಒಪಿಸಿ) ಪ್ರೈವೇಟ್ ಲಿಮಿಟೆಡ್ ಸಂಸ್ಥೆಯುವ ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ವಿವಿಧ ಉದ್ಯೋಗಾಕಾಂಕ್ಷಿಗಳಿಗೆ ₹ 1.82 ಕೋಟಿ ವಂಚನೆ ಮಾಡಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>‘ವಿದೇಶದಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ಸಂಸ್ಥೆಯು ನನ್ನಿಂದ ₹ 1.65 ಲಕ್ಷ ಪಡೆದುಕೊಂಡಿತ್ತು. ಆದರೆ ನೀಡಿದ್ದ ಭರವಸೆಯಂತೆ ಉದ್ಯೋಗ ಕೊಡಿಸಿಲ್ಲ. ನನ್ನಂತೆಯೇ ಅನೇಕ ಉದ್ಯೋಗಾಂಕ್ಷಿಗಳಿಂದ ಹಣ ಪಡೆದುಕೊಂಡಿರುವ ಸಂಸ್ಥೆ ಅವರಿಗೂ ಇದೇ ರೀತಿ ವಂಚನೆ ಮಾಡಿದೆ. ಅಂದಾಜು ₹ 1.82 ಕೋಟಿ ಮೊತ್ತವನ್ನು ಸಂಸ್ಥೆ ಉದ್ಯೋಗಾಕಾಂಕ್ಷಿಗಳಿಂದ ಪಡೆದುಕೊಂಡಿದ್ದು, ಉದ್ಯೋಗವನ್ನೂ ಕೊಡಿಸದೇ, ಪಡೆದ ಹಣವನ್ನೂ ಮರಳಿಸದೇ ವಂಚಿಸಿದೆ’ ಎಂದು ಸಂತ್ರಸ್ತ ವ್ಯಕ್ತಿಯೊಬ್ಬರು ದೂರಿನಲ್ಲಿ ಆರೋಪಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ನಂಬಿಕೆ ದ್ರೋಹವೆಸಗಿರುವ ಸಂಸ್ಥೆಯ ಆಡಳಿತಾಧಿಕಾರಿ ಮತ್ತು ಉದ್ಯೋಗಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>