ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡುಬಿದಿರೆ: ಸಹಪಾಠಿ ಜೊತೆ ಮಾತನಾಡಿದ ವಿದ್ಯಾರ್ಥಿಗೆ ಹಲ್ಲೆ

ಮತೀಯ ಗೂಂಡಾಗಿರಿ ಪ್ರಕರಣ
Published 22 ಆಗಸ್ಟ್ 2023, 15:34 IST
Last Updated 22 ಆಗಸ್ಟ್ 2023, 15:34 IST
ಅಕ್ಷರ ಗಾತ್ರ

ಮೂಡುಬಿದಿರೆ (ದಕ್ಷಿಣ ಕನ್ನಡ): ಇಲ್ಲಿನ ಬಸ್ ನಿಲ್ದಾಣದ ಬಳಿ ಸೋಮವಾರ ರಾತ್ರಿ ಮತೀಯ ಗೂಂಡಾಗಿರಿ ಪ್ರಕರಣ ನಡೆದಿದ್ದು, ಮೂವರು ಯುವಕರ ವಿರುದ್ಧ ಮೂಡುಬಿದಿರೆ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.

‘ರಾಜೀವ ಗಾಂಧಿ ಕಾಂಪ್ಲೆಕ್ಸ್ ಬಳಿ ಹಿಂದೂ ಧರ್ಮದ ಸಹಪಾಠಿ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಮೂವರು ಯುವಕರ ಗುಂಪು ಮುಸ್ಲಿಂ ವಿದ್ಯಾರ್ಥಿಗೆ ಹಲ್ಲೆ ನಡೆಸಿತ್ತು’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಇಲ್ಲಿನ ಕಾಲೇಜೊಂದರ ವಿದ್ಯಾರ್ಥಿನಿ ಬೆಂಗಳೂರಿಗೆ ತೆರಳಲು ಬಸ್‌ಗಾಗಿ ಸೋಮವಾರ ರಾತ್ರಿ ಬಸ್‌ನಿಲ್ದಾಣದ ಬಳಿ ಕಾಯುತ್ತಿದ್ದ ವೇಳೆ ಆಕೆಯ ಸಹಪಾಠಿಯಾಗಿದ್ದ ಕೋಟೆಬಾಗಿಲಿನ ಮುಸ್ಲಿಂ ಯುವಕ ಆಕೆ ಜೊತೆ ಮಾತನಾಡುತ್ತಾ ನಿಂತಿದ್ದ. ಇದನ್ನು ಕೆಲವು ಸ್ಥಳಿಯರು ಗಮನಿಸಿದ್ದರು. ವಿದ್ಯಾರ್ಥಿನಿ ಕೆಎಸ್ಆರ್ಟಿಸಿ ಬಸ್ ಹತ್ತಿ ತೆರಳಿದ ನಂತರ ಯುವಕರ ತಂಡವೊಂದು ವಿದ್ಯಾರ್ಥಿಗೆ ಹಲ್ಲೆ ನಡೆಸಿತ್ತು. ಹಲ್ಲೆಗೊಳಗಾದ ವಿದ್ಯಾರ್ಥಿ ನೀಡಿದ ದೂರಿನ ಮೇರೆಗೆ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT