ಮೂಡುಬಿದಿರೆ (ದಕ್ಷಿಣ ಕನ್ನಡ): ಇಲ್ಲಿನ ಬಸ್ ನಿಲ್ದಾಣದ ಬಳಿ ಸೋಮವಾರ ರಾತ್ರಿ ಮತೀಯ ಗೂಂಡಾಗಿರಿ ಪ್ರಕರಣ ನಡೆದಿದ್ದು, ಮೂವರು ಯುವಕರ ವಿರುದ್ಧ ಮೂಡುಬಿದಿರೆ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.
‘ರಾಜೀವ ಗಾಂಧಿ ಕಾಂಪ್ಲೆಕ್ಸ್ ಬಳಿ ಹಿಂದೂ ಧರ್ಮದ ಸಹಪಾಠಿ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಮೂವರು ಯುವಕರ ಗುಂಪು ಮುಸ್ಲಿಂ ವಿದ್ಯಾರ್ಥಿಗೆ ಹಲ್ಲೆ ನಡೆಸಿತ್ತು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
‘ಇಲ್ಲಿನ ಕಾಲೇಜೊಂದರ ವಿದ್ಯಾರ್ಥಿನಿ ಬೆಂಗಳೂರಿಗೆ ತೆರಳಲು ಬಸ್ಗಾಗಿ ಸೋಮವಾರ ರಾತ್ರಿ ಬಸ್ನಿಲ್ದಾಣದ ಬಳಿ ಕಾಯುತ್ತಿದ್ದ ವೇಳೆ ಆಕೆಯ ಸಹಪಾಠಿಯಾಗಿದ್ದ ಕೋಟೆಬಾಗಿಲಿನ ಮುಸ್ಲಿಂ ಯುವಕ ಆಕೆ ಜೊತೆ ಮಾತನಾಡುತ್ತಾ ನಿಂತಿದ್ದ. ಇದನ್ನು ಕೆಲವು ಸ್ಥಳಿಯರು ಗಮನಿಸಿದ್ದರು. ವಿದ್ಯಾರ್ಥಿನಿ ಕೆಎಸ್ಆರ್ಟಿಸಿ ಬಸ್ ಹತ್ತಿ ತೆರಳಿದ ನಂತರ ಯುವಕರ ತಂಡವೊಂದು ವಿದ್ಯಾರ್ಥಿಗೆ ಹಲ್ಲೆ ನಡೆಸಿತ್ತು. ಹಲ್ಲೆಗೊಳಗಾದ ವಿದ್ಯಾರ್ಥಿ ನೀಡಿದ ದೂರಿನ ಮೇರೆಗೆ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.