ಮೇ 5ರಂದು ಸಂಜೆ 4ಕ್ಕೆ ನಾರಾಯಣಗುರುಗಳ ಬಿಂಬವನ್ನು ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಿಂದ ಗುರುಮಂದಿರಕ್ಕೆ ಶೋಭಾಯಾತ್ರೆಯಲ್ಲಿ ತರಲಾಗುತ್ತದೆ. ಮೇ 7ರಂದು ಬೆಳಿಗ್ಗೆ 7ಕ್ಕೆ ಋತ್ವಿಜರ ಆಗಮನ, ಸಾಮೂಹಿಕ ಪ್ರಾರ್ಥನೆ, ತೋರಣ ಮುಹೂರ್ತ, ಮಹಾಗಣಪತಿ ಹೋಮ, ಮಹಾಮೃತ್ಯುಂಜಯ ಹೋಮ, ಸಂಜೆ 5ಕ್ಕೆ ಗುರುಪೂಜೆ, ವಾಸ್ತು ರಾಕ್ಷೋಘ್ನ ಹೋಮ, ಪ್ರಸಾದ ಶುದ್ಧಿ, ಬಿಂಬಾವಾಸ ನಡೆಯಲಿದೆ ಎಂದರು.