‘ಮನವಿಯನ್ನು ಪರಿಗಣಿಸಿದ ನ್ಯಾಯಾಲಯವು, ಸಂತ್ರಸ್ತೆಗೆ ವಿತರಿಸಿದ್ದ ಮೊತ್ತವನ್ನು ವಸೂಲು ಮಾಡಿ ನ್ಯಾಯಾಲಯಕ್ಕೆ ವರದಿ ನೀಡುವಂತೆ ನಿರ್ದೇಶಿಸಿತ್ತು. ಅದರಂತೆ ಜ.4ರಂದು ₹3.75 ಲಕ್ಷ ಮೊತ್ತವನ್ನು ಸಂತ್ರಸ್ತೆಯ ಚಿಕ್ಕಮ್ಮನಿಂದ ವಸೂಲು ಮಾಡಿ ಜಿಲ್ಲಾಧಿಕಾರಿ ಮತ್ತು ಉಪನಿರ್ದೇಶಕರ ಜಂಟಿ ಖಾತೆಗೆ ಇಲಾಖಾ ಉಪನಿರ್ದೇಶಕರು ಮರು ಜಮೆ ಮಾಡಿದ್ದಾರೆ’ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಾಲತಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.