ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕವಿ ಸಿದ್ಧಲಿಂಗಯ್ಯಗೆ ಶ್ರದ್ಧಾಂಜಲಿ

ಪುಷ್ಪ ನಮನ ಸಲ್ಲಿಸಿದ ಕುಲಪತಿ
Last Updated 13 ಜೂನ್ 2021, 4:04 IST
ಅಕ್ಷರ ಗಾತ್ರ

ಕೊಣಾಜೆ(ಮಂಗಳಗಂಗೋತ್ರಿ): ಸಾಹಿತಿ ಡಾ.ಸಿದ್ಧಲಿಂಗಯ್ಯ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಶನಿವಾರ ನಡೆಯಿತು.

ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಸ್.ಯಡಪಡಿತ್ತಾಯ ಅವರು ಸಿದ್ಧಲಿಂಗಯ್ಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ‘ಸಿದ್ಧಲಿಂಗಯ್ಯ ಅವರು ಅನ್ಯಾಯ, ಅಸಮಾನತೆಯ ವಿರುದ್ಧ ಕಾವ್ಯಗಳ ಮೂಲಕ ಪ್ರತಿಭಟಿಸಿ, ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದರು’ ಎಂದರು.

ವಿಶ್ವವಿದ್ಯಾಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಪ್ರೊ.ಸೋಮಣ್ಣ ಮಾತನಾಡಿದರು. ಕನ್ನಡ ವಿಭಾಗದ ಚಂದ್ರಶೇಖರ್ ಅವರು ಸಿದ್ಧಲಿಂಗಯ್ಯ ಅವರ ಕವನ ವಾಚಿಸಿದರು. ಸಂಶೋಧನಾ ವಿದ್ಯಾರ್ಥಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT