<p>ಮಂಗಳೂರು: ನಗರದಲ್ಲಿ ಕೋವಿಡ್–19 ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವುದು ಮತ್ತು ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ವಿಚಾರದಲ್ಲಿ ಸಮಸ್ಯೆ ತಪ್ಪಿಸಲು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸ್ವಯಂಸೇವಕರ ತಂಡಗಳನ್ನು ನಿಯೋಜಿಸಲಾಗುವುದು ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ವಿವಿಧೆಡೆ ಕೋವಿಡ್ ಸೋಂಕಿತರು ಮೃತಪಟ್ಟಾಗ ಅಮಾನವೀಯ ರೀತಿಯಲ್ಲಿ ಅಂತ್ಯಸಂಸ್ಕಾರ ನಡೆಸಲಾಗಿದೆ. ಮಂಗಳೂರಿನಲ್ಲಿ ಅಂತಹ ಘಟನೆಗಳನ್ನು ತಪ್ಪಿಸಲು ಪಕ್ಷದ ವತಿಯಿಂದ ಸ್ವಯಂಸೇವಕರನ್ನು ನಿಯೋಜಿಸಲಾಗುವುದು’ ಎಂದರು.</p>.<p>ಶನಿವಾರ ಸೋಂಕಿತರೊಬ್ಬರು ಗಂಟೆಗಟ್ಟಲೆ ಕಾದರೂ ಆಸ್ಪತ್ರೆಗೆ ಕರೆದೊಯ್ಯುವವರು ಇರಲಿಲ್ಲ. ಬಳಿಕ ಅವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋವಿಡ್ ಪರೀಕ್ಷಾ ವರದಿ ಮತ್ತು ಸೋಂಕು ತಗುಲದೇ ಇರುವುದನ್ನು ದೃಢಪಡಿಸುವ ಪ್ರಮಾಣಪತ್ರ ನೀಡಲು ಜಿಲ್ಲಾಡಳಿತ ಏಕಗವಾಕ್ಷಿ ವ್ಯವಸ್ಥೆಯೊಂದನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಮಾತನಾಡಿ, ‘ಸ್ವಯಂಸೇವಕರನ್ನು ನಿಯೋಜಿಸುವ ಪ್ರಸ್ತಾವಕ್ಕೆ ಪಕ್ಷದ ಕಾರ್ಯಕರ್ತರಿಂದ ಉತ್ತಮ ಸ್ಪಂದನೆ ದೊರಕಿದೆ. ಪ್ರತಿ ಐದು ವಾರ್ಡ್ಗಳಿಗೆ ತಲಾ ಆರು ಜನರ ಒಂದು ತಂಡವನ್ನು ನಿಯೋಜಿಸಲಾಗುವುದು’ ಎಂದರು.</p>.<p>ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವ ವಿಚಾರದಲ್ಲಿ ಜಿಲ್ಲಾಡಳಿತದಲ್ಲಿ ಸಮನ್ವಯ ಇಲ್ಲ. ಶುಕ್ರವಾರ ಒಂದೇ ಕುಟುಂಬದ ಆರು ಜನರನ್ನು ಆಸ್ಪತ್ರೆಗೆ ದಾಖಲಿಸುವ ಮೊದಲು ಮೂರು ಗಂಟೆಗಳ ಕಾಲ ಆಂಬುಲೆನ್ಸ್ನಲ್ಲೇ ಕಾದು ನಿಲ್ಲಿಸಿದ್ದರು ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ನಗರದಲ್ಲಿ ಕೋವಿಡ್–19 ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವುದು ಮತ್ತು ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ವಿಚಾರದಲ್ಲಿ ಸಮಸ್ಯೆ ತಪ್ಪಿಸಲು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸ್ವಯಂಸೇವಕರ ತಂಡಗಳನ್ನು ನಿಯೋಜಿಸಲಾಗುವುದು ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ವಿವಿಧೆಡೆ ಕೋವಿಡ್ ಸೋಂಕಿತರು ಮೃತಪಟ್ಟಾಗ ಅಮಾನವೀಯ ರೀತಿಯಲ್ಲಿ ಅಂತ್ಯಸಂಸ್ಕಾರ ನಡೆಸಲಾಗಿದೆ. ಮಂಗಳೂರಿನಲ್ಲಿ ಅಂತಹ ಘಟನೆಗಳನ್ನು ತಪ್ಪಿಸಲು ಪಕ್ಷದ ವತಿಯಿಂದ ಸ್ವಯಂಸೇವಕರನ್ನು ನಿಯೋಜಿಸಲಾಗುವುದು’ ಎಂದರು.</p>.<p>ಶನಿವಾರ ಸೋಂಕಿತರೊಬ್ಬರು ಗಂಟೆಗಟ್ಟಲೆ ಕಾದರೂ ಆಸ್ಪತ್ರೆಗೆ ಕರೆದೊಯ್ಯುವವರು ಇರಲಿಲ್ಲ. ಬಳಿಕ ಅವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋವಿಡ್ ಪರೀಕ್ಷಾ ವರದಿ ಮತ್ತು ಸೋಂಕು ತಗುಲದೇ ಇರುವುದನ್ನು ದೃಢಪಡಿಸುವ ಪ್ರಮಾಣಪತ್ರ ನೀಡಲು ಜಿಲ್ಲಾಡಳಿತ ಏಕಗವಾಕ್ಷಿ ವ್ಯವಸ್ಥೆಯೊಂದನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಮಾತನಾಡಿ, ‘ಸ್ವಯಂಸೇವಕರನ್ನು ನಿಯೋಜಿಸುವ ಪ್ರಸ್ತಾವಕ್ಕೆ ಪಕ್ಷದ ಕಾರ್ಯಕರ್ತರಿಂದ ಉತ್ತಮ ಸ್ಪಂದನೆ ದೊರಕಿದೆ. ಪ್ರತಿ ಐದು ವಾರ್ಡ್ಗಳಿಗೆ ತಲಾ ಆರು ಜನರ ಒಂದು ತಂಡವನ್ನು ನಿಯೋಜಿಸಲಾಗುವುದು’ ಎಂದರು.</p>.<p>ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವ ವಿಚಾರದಲ್ಲಿ ಜಿಲ್ಲಾಡಳಿತದಲ್ಲಿ ಸಮನ್ವಯ ಇಲ್ಲ. ಶುಕ್ರವಾರ ಒಂದೇ ಕುಟುಂಬದ ಆರು ಜನರನ್ನು ಆಸ್ಪತ್ರೆಗೆ ದಾಖಲಿಸುವ ಮೊದಲು ಮೂರು ಗಂಟೆಗಳ ಕಾಲ ಆಂಬುಲೆನ್ಸ್ನಲ್ಲೇ ಕಾದು ನಿಲ್ಲಿಸಿದ್ದರು ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>