<p><strong>ಮಂಗಳೂರು</strong>: ನೀಟ್ ಪರೀಕ್ಷೆ ಹಗರಣದಿಂದಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದ್ದು, ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಎನ್ಎಸ್ಯುಐ ಸದಸ್ಯರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.</p>.<p>ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಮಾತನಾಡಿ, ಕೇಂದ್ರ ಸರ್ಕಾರ ನಡೆಸುವ ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಪ್ರಸ್ತುತ ನಡೆಯುತ್ತಿರುವ ತನಿಖೆ ಬಗ್ಗೆ ವಿಶ್ವಾಸ ಇಲ್ಲದಂತಾಗಿದ್ದು, ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು’ ಎಂದರು.</p>.<p>ನೀಟ್ ಪರೀಕ್ಷೆಯಲ್ಲಿ ನಡೆದಿರುವ ಹಗರಣವನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಜಂಟಿ ಆಶ್ರಯದಲ್ಲಿ ಮಂಗಳವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.</p>.<p>ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿದರು.</p>.<p>ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ, ಪ್ರಮುಖರಾದ ಶಶಿಧರ್ ಹೆಗ್ಡೆ, ಕೆ. ಅಶ್ರಫ್, ಸವಾದ್ ಸುಳ್ಯ, ಸುಹಾನ್ ಆಳ್ವ, ಸುಖ್ವಿಂದರ್ ಸಿಂಗ್, ವಿಶ್ವಾಸ್ಕುಮಾರ್ ದಾಸ್, ನಝೀರ್ ಬಜಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ನೀಟ್ ಪರೀಕ್ಷೆ ಹಗರಣದಿಂದಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದ್ದು, ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಎನ್ಎಸ್ಯುಐ ಸದಸ್ಯರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.</p>.<p>ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಮಾತನಾಡಿ, ಕೇಂದ್ರ ಸರ್ಕಾರ ನಡೆಸುವ ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಪ್ರಸ್ತುತ ನಡೆಯುತ್ತಿರುವ ತನಿಖೆ ಬಗ್ಗೆ ವಿಶ್ವಾಸ ಇಲ್ಲದಂತಾಗಿದ್ದು, ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು’ ಎಂದರು.</p>.<p>ನೀಟ್ ಪರೀಕ್ಷೆಯಲ್ಲಿ ನಡೆದಿರುವ ಹಗರಣವನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಜಂಟಿ ಆಶ್ರಯದಲ್ಲಿ ಮಂಗಳವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.</p>.<p>ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿದರು.</p>.<p>ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ, ಪ್ರಮುಖರಾದ ಶಶಿಧರ್ ಹೆಗ್ಡೆ, ಕೆ. ಅಶ್ರಫ್, ಸವಾದ್ ಸುಳ್ಯ, ಸುಹಾನ್ ಆಳ್ವ, ಸುಖ್ವಿಂದರ್ ಸಿಂಗ್, ವಿಶ್ವಾಸ್ಕುಮಾರ್ ದಾಸ್, ನಝೀರ್ ಬಜಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>