ಸಂಸದರ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೈಗೊಂಡ ದಿಟ್ಟ ನಿರ್ಣಯಗಳಿಂದ ಕೊರೊನಾ ನಿಯಂತ್ರಣದಲ್ಲಿದೆ. ಆದರೆ, ಲಾಕ್ಡೌನ್ ಜಾರಿಯಲ್ಲಿದ್ದರೂ ಮಂಗಳೂರು ರೈಲು ನಿಲ್ದಾಣದಲ್ಲಿ ನೂರಾರು ಮಂದಿ ಹೊರ ರಾಜ್ಯದ ಕಾರ್ಮಿಕರನ್ನು ಸೇರಿಸಿ ಕಾಂಗ್ರೆಸ್ ನಾಯಕರು ಭಾಷಣ ಮಾಡಿದ್ದಾರೆ. ಇದರಿಂದ ಕೊರೊನಾ ಪ್ರಕರಣ ಹೆಚ್ಚಾದರೆ ಅದಕ್ಕೆ ಕಾಂಗ್ರೆಸ್ ನೇರ ಹೊಣೆ’ ಎಂದು ಹೇಳಿದರು.