<p><strong>ಬಂಟ್ವಾಳ</strong>: ರಾಜ್ಯ ಅಥವಾ ಕೇಂದ್ರ ಸರ್ಕಾರದ ಬೊಕ್ಕಸ ತುಂಬಲು ಗ್ಯಾರಂಟಿ ಫಲಾನುಭವಿಗಳೇ ಮುಖ್ಯ ಕಾರಣ ಎಂಬುದನ್ನು ಗ್ಯಾರಂಟಿ ಯೋಜನೆ ವಿರೋಧಿಗಳು ಅರ್ಥೈಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.</p>.<p>ಇಲ್ಲಿನ ಬಿ.ಸಿ.ರೋಡು ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಶನಿವಾರ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಜ್ಯ ಸರ್ಕಾರದ ಬೊಕ್ಕಸ ಖಾಲಿ ಆಗುತ್ತದೆ ಎಂಬ ಆರೋಪದ ನಡುವೆಯೇ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಅನುಷ್ಠಾನ ಗೊಂಡಿರುವುದಕ್ಕೆ ಈ ಸಮಾವೇಶದಲ್ಲಿ ಸೇರಿದ ಜನಸಂದಣಿಯೇ ಸಾಕ್ಷಿ ಎಂದು ಅವರು ಹೇಳಿದರು.</p>.<p>ವಿಧಾನಪರಿಷತ್ ಸದಸ್ಯರಾದ ಕೆ.ಹರೀಶ ಕುಮಾರ್, ಬಿ.ಮಂಜುನಾಥ ಭಂಡಾರಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಎಸ್.ಗಟ್ಟಿ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಮಾತನಾಡಿದರು.</p>.<p>ತಹಶೀಲ್ದಾರ್ ಅರ್ಚನಾ ಡಿ.ಭಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಮಮ್ತಾಜ್ , ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಾರಾಯಣ ಭಟ್, ಕೆಎಸ್ಆರ್ಟಿಸಿ ಅಧಿಕಾರಿ ಜಯಕರ ಶೆಟ್ಟಿ, ಜಿಲ್ಲಾ ಕೌಶಲ್ಯಾಧಿಕಾರಿ ಪ್ರದೀಪ್ ಡಿಸೋಜ ಮಾಹಿತಿ ನೀಡಿದರು.</p>.<p>ಫಲಾನುಭವಿಗಳು ಅನಿಸಿಕೆ ವ್ಯಕ್ತಪಡಿಸಿದರು.</p>.<p>ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಪಂಚಾಯತಿ ಸಿಇಒ ಡಾ.ಕೆ.ಆನಂದ್., ಸಹಾಯಕ ಕಮಿಷನರ್ ರಾಜು, ಪಿಡಬ್ಲ್ಯೂಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಯಪ್ರಕಾಶ್ ಭಾಗವಹಿಸಿದ್ದರು.</p>.<p>ತಹಶೀಲ್ದಾರ್ ಅರ್ಚನಾ ಡಿ.ಭಟ್ ಸ್ವಾಗತಿಸಿದರು.</p>.<p>ತೋಟಗಾರಿಕಾ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ರಾಜೀವ್ ಕಕ್ಯಪದವು ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ</strong>: ರಾಜ್ಯ ಅಥವಾ ಕೇಂದ್ರ ಸರ್ಕಾರದ ಬೊಕ್ಕಸ ತುಂಬಲು ಗ್ಯಾರಂಟಿ ಫಲಾನುಭವಿಗಳೇ ಮುಖ್ಯ ಕಾರಣ ಎಂಬುದನ್ನು ಗ್ಯಾರಂಟಿ ಯೋಜನೆ ವಿರೋಧಿಗಳು ಅರ್ಥೈಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.</p>.<p>ಇಲ್ಲಿನ ಬಿ.ಸಿ.ರೋಡು ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಶನಿವಾರ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಜ್ಯ ಸರ್ಕಾರದ ಬೊಕ್ಕಸ ಖಾಲಿ ಆಗುತ್ತದೆ ಎಂಬ ಆರೋಪದ ನಡುವೆಯೇ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಅನುಷ್ಠಾನ ಗೊಂಡಿರುವುದಕ್ಕೆ ಈ ಸಮಾವೇಶದಲ್ಲಿ ಸೇರಿದ ಜನಸಂದಣಿಯೇ ಸಾಕ್ಷಿ ಎಂದು ಅವರು ಹೇಳಿದರು.</p>.<p>ವಿಧಾನಪರಿಷತ್ ಸದಸ್ಯರಾದ ಕೆ.ಹರೀಶ ಕುಮಾರ್, ಬಿ.ಮಂಜುನಾಥ ಭಂಡಾರಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಎಸ್.ಗಟ್ಟಿ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಮಾತನಾಡಿದರು.</p>.<p>ತಹಶೀಲ್ದಾರ್ ಅರ್ಚನಾ ಡಿ.ಭಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಮಮ್ತಾಜ್ , ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಾರಾಯಣ ಭಟ್, ಕೆಎಸ್ಆರ್ಟಿಸಿ ಅಧಿಕಾರಿ ಜಯಕರ ಶೆಟ್ಟಿ, ಜಿಲ್ಲಾ ಕೌಶಲ್ಯಾಧಿಕಾರಿ ಪ್ರದೀಪ್ ಡಿಸೋಜ ಮಾಹಿತಿ ನೀಡಿದರು.</p>.<p>ಫಲಾನುಭವಿಗಳು ಅನಿಸಿಕೆ ವ್ಯಕ್ತಪಡಿಸಿದರು.</p>.<p>ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಪಂಚಾಯತಿ ಸಿಇಒ ಡಾ.ಕೆ.ಆನಂದ್., ಸಹಾಯಕ ಕಮಿಷನರ್ ರಾಜು, ಪಿಡಬ್ಲ್ಯೂಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಯಪ್ರಕಾಶ್ ಭಾಗವಹಿಸಿದ್ದರು.</p>.<p>ತಹಶೀಲ್ದಾರ್ ಅರ್ಚನಾ ಡಿ.ಭಟ್ ಸ್ವಾಗತಿಸಿದರು.</p>.<p>ತೋಟಗಾರಿಕಾ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ರಾಜೀವ್ ಕಕ್ಯಪದವು ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>