ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನೋಟ್ ಬ್ಯಾನ್, ಜಿಎಸ್ಟಿಯಂತಹ ಕಾನೂನು ಜಾರಿಗೆ ತಂದು ಜನರನ್ನು ಸಂಕಷ್ಟಕ್ಕೆ ದೂಡಿದೆ. ಇದುವರೆಗೆ ಸರ್ಕಾರ ಅಭಿವೃದ್ಧಿಪರ, ಜನಪರ ಕಾರ್ಯಗಳನ್ನು ಅನುಷ್ಠಾನಕ್ಕೆ ತಂದಿಲ್ಲ. ಯುಪಿಎ ಸರ್ಕಾರ ಇದ್ದಾಗ ಪೆಟ್ರೋಲ್-ಡೀಸೆಲ್ ದರ ₹70 ಇದ್ದು, ಆಗ ವಿದೇಶದಲ್ಲಿ ಕಚ್ಚಾತೈಲ ದರ 145 ಡಾಲರ್ ಇತ್ತು. ಈಗ ಕಚ್ಚಾತೈಲ ದರ 45 ಡಾಲರ್ ಇದ್ದರೂ, ಪೆಟ್ರೋಲ್ ಬೆಲೆ ₹100 ಸಮೀಪಿಸಿದೆ. ಬೆಲೆ ಏರಿಕೆಯೇ ಇವರ ಬಹುದೊಡ್ಡ ಸಾಧನೆ ಎಂದು ಟೀಕಿಸಿದರು.