ಸಂಸದ ನಳಿನ್ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಎಲ್ಲ ಶಾಸಕರು ಕೆಲಸ ಮಾಡುತ್ತಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಹೆಚ್ಚುವರಿ ವೆಂಟಿಲೇಟರ್ ಅಳವಡಿಸುವ ಕೆಲಸ, ಆಮ್ಲಜನಕ ಉತ್ಪಾದನೆ, ಆಮ್ಲಜನ ಶೇಖರಣಾ ಟ್ಯಾಂಕ್ ಅಳವಡಿಸಲಾಗುತ್ತಿದೆ. ಎಲ್ಲ ವೈದ್ಯಕೀಯ ಆಸ್ಪತ್ರೆಯ ವೈದ್ಯರನ್ನು ‘ವೈದ್ಯರ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಮೂಲಕ ಗ್ರಾಮೀಣ ಜನರಿಗೆ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ ಎಂದು ಹೇಳಿದರು.