‘ಪಕ್ಷದ ಕಾರ್ಯಕರ್ತರಾಗಲಿ, ನಾಯಕರಾಗಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನನ್ನ ಗಮನಕ್ಕೆ ತಂದಿಲ್ಲ. ಇದನ್ನು ನಾನು ಬೇಸರಿಂದ ಹೇಳುತ್ತಿದ್ದೇನೆ. ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರು ನಾನು ಸತ್ತಿರುವುದಾಗಿ ಭಾವಿಸಿದ್ದಾರೆ. ಈ ರೀತಿ ಆಗಬಾರದಿತ್ತು. ಚುನಾವಣೆ ಘೋಷಣೆ ಆದ ಕೂಡಲೇ ನಾನು ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರಿಗೆ ಕರೆ ಮಾಡಿ, ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಹಿರಿತನ, ಜಾತಿ ಹಾಗೂ ವರ್ಗಗಳಿಗೆ ಅವಕಾಶ ನೀಡಬೇಕು ಎಂದು ತಿಳಿಸಿದ್ದೆ’ ಎಂದರು.