ಇದೇ ಆದೇಶ 2009ರಲ್ಲೂ ಇತ್ತು. ಆದರೆ, ಕಾಂಗ್ರೆಸ್ ಸರ್ಕಾರ ಧಾರ್ಮಿಕ ಕೇಂದ್ರಗಳನ್ನು ಏಕಾಏಕಿ ಒಡೆಯುವ ಕೆಲಸ ಮಾಡಿಲ್ಲ. ಧಾರ್ಮಿಕ ಕೇಂದ್ರಗಳ ಜೊತೆ ಜನರ ನಂಬಿಕೆ, ಆಚರಣೆಗಳು ಸೇರಿಕೊಂಡಿರುತ್ತವೆ. ಈ ಸೂಕ್ಷ್ಮ ವಿಚಾರ ತಿಳಿದುಕೊಳ್ಳುವಲ್ಲಿ ಬಿಜೆಪಿ ವಿಫಲವಾಗಿದೆ. ಅಕ್ರಮವಾಗಿ ಕಟ್ಟಿದ್ದ ಧಾರ್ಮಿಕ ಕೇಂದ್ರಗಳನ್ನು ಸಕ್ರಮಗೊಳಿಸುವ ಬಗ್ಗೆ ಸರ್ಕಾರ ಸಮಾಲೋಚನೆ ನಡೆಸಬೇಕು ಎಂದು ಆಗ್ರಹಿಸಿದರು.