<p><strong>ಮಂಗಳೂರು:</strong> ‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಇರುವಾಗ ನಾಯಕತ್ವ ಬದಲಾವಣೆ ಅವಶ್ಯಕತೆ ಬರುವುದಿಲ್ಲ, ಆ ಚರ್ಚೆ ಅಪ್ರಸ್ತುತ’ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಶುಕ್ರವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ‘ಪಕ್ಷದ ಹೈಕಮಾಂಡ್ ಇದೆ. ಈ ಬಗ್ಗೆ ಹೈಕಮಾಂಡ್ ತೀರ್ಮಾನವೇ ಅಂತಿಮ’ ಎಂದರು.</p>.<p>‘ಸಚಿವರಾದ ಸತೀಶ ಜಾರಕಿಹೊಳಿ, ಜಿ. ಪರಮೇಶ್ವರ ಮತ್ತು ಎಚ್.ಸಿ. ಮಹದೇವಪ್ಪ ಅವರೆಲ್ಲ ಸ್ನೇಹಿತರು. ಅವರು ಆಗಾಗ ಭೇಟಿಯಾಗುತ್ತಿರುತ್ತಾರೆ. ಇದಕ್ಕೊಂದು ಕಥೆ ಕಟ್ಟುವ ಅಗತ್ಯವಿಲ್ಲ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿ ಇಲ್ಲ’ ಎಂದರು.</p>.<p>‘ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೃತ್ಯಗಳ ಕುರಿತ ಎಸ್ಐಟಿ ತನಿಖೆ ಹಸ್ತಕ್ಷೇಪ ಇಲ್ಲದೆ ನಡೆದಿದೆ. ತಪ್ಪಿತಸ್ಥರ ಮೇಲೆ ಮುಲಾಜಿಲ್ಲದೆ ಕ್ರಮವಾಗುತ್ತದೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದರು.</p>.<div><blockquote>ಸಂಪುಟ ವಿಸ್ತರಣೆ ಎಂಬುದು ಮುಖ್ಯಮಂತ್ರಿ ಪರಮಾಧಿಕಾರ. ಇದೇ 13ರಂದು ಸಿ.ಎಂ ಕರೆದಿರುವ ಔತಣ ಕೂಟಕ್ಕೆ ನಾವೆಲ್ಲರೂ ಭಾಗವಹಿಸಲಿದ್ದೇವೆ’ </blockquote><span class="attribution">ಈಶ್ವರ ಖಂಡ್ರೆ ಅರಣ್ಯ ಸಚಿವ</span></div>.<h2>ಸಚಿವನಾಗುವ ಆಸೆಯಿದೆ: ಸಲೀಂ</h2>.<p> <strong>ಕೊಪ್ಪಳ:</strong> ‘ನನಗೂ ಸಚಿವನಾಗುವ ಆಸೆಯಿದೆ. ಮೊದಲ ಅವಧಿಯಲ್ಲೇ ಮಂತ್ರಿ ಸ್ಥಾನ ಸಿಗಬೇಕಿತ್ತು’ ಎಂದು ಮೇಲ್ಮನೆಯ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದರು. ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಹಿಂದೆ ಸಚಿವ ಸ್ಥಾನ ನೀಡದೇ ಏಕೆ ಕೈಬಿಟ್ಟರು ಎನ್ನುವುದು ಗೊತ್ತಿಲ್ಲ. ಈ ಬಾರಿ ಆಗುವ ಭರವಸೆಯಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಇರುವಾಗ ನಾಯಕತ್ವ ಬದಲಾವಣೆ ಅವಶ್ಯಕತೆ ಬರುವುದಿಲ್ಲ, ಆ ಚರ್ಚೆ ಅಪ್ರಸ್ತುತ’ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಶುಕ್ರವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ‘ಪಕ್ಷದ ಹೈಕಮಾಂಡ್ ಇದೆ. ಈ ಬಗ್ಗೆ ಹೈಕಮಾಂಡ್ ತೀರ್ಮಾನವೇ ಅಂತಿಮ’ ಎಂದರು.</p>.<p>‘ಸಚಿವರಾದ ಸತೀಶ ಜಾರಕಿಹೊಳಿ, ಜಿ. ಪರಮೇಶ್ವರ ಮತ್ತು ಎಚ್.ಸಿ. ಮಹದೇವಪ್ಪ ಅವರೆಲ್ಲ ಸ್ನೇಹಿತರು. ಅವರು ಆಗಾಗ ಭೇಟಿಯಾಗುತ್ತಿರುತ್ತಾರೆ. ಇದಕ್ಕೊಂದು ಕಥೆ ಕಟ್ಟುವ ಅಗತ್ಯವಿಲ್ಲ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿ ಇಲ್ಲ’ ಎಂದರು.</p>.<p>‘ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೃತ್ಯಗಳ ಕುರಿತ ಎಸ್ಐಟಿ ತನಿಖೆ ಹಸ್ತಕ್ಷೇಪ ಇಲ್ಲದೆ ನಡೆದಿದೆ. ತಪ್ಪಿತಸ್ಥರ ಮೇಲೆ ಮುಲಾಜಿಲ್ಲದೆ ಕ್ರಮವಾಗುತ್ತದೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದರು.</p>.<div><blockquote>ಸಂಪುಟ ವಿಸ್ತರಣೆ ಎಂಬುದು ಮುಖ್ಯಮಂತ್ರಿ ಪರಮಾಧಿಕಾರ. ಇದೇ 13ರಂದು ಸಿ.ಎಂ ಕರೆದಿರುವ ಔತಣ ಕೂಟಕ್ಕೆ ನಾವೆಲ್ಲರೂ ಭಾಗವಹಿಸಲಿದ್ದೇವೆ’ </blockquote><span class="attribution">ಈಶ್ವರ ಖಂಡ್ರೆ ಅರಣ್ಯ ಸಚಿವ</span></div>.<h2>ಸಚಿವನಾಗುವ ಆಸೆಯಿದೆ: ಸಲೀಂ</h2>.<p> <strong>ಕೊಪ್ಪಳ:</strong> ‘ನನಗೂ ಸಚಿವನಾಗುವ ಆಸೆಯಿದೆ. ಮೊದಲ ಅವಧಿಯಲ್ಲೇ ಮಂತ್ರಿ ಸ್ಥಾನ ಸಿಗಬೇಕಿತ್ತು’ ಎಂದು ಮೇಲ್ಮನೆಯ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದರು. ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಹಿಂದೆ ಸಚಿವ ಸ್ಥಾನ ನೀಡದೇ ಏಕೆ ಕೈಬಿಟ್ಟರು ಎನ್ನುವುದು ಗೊತ್ತಿಲ್ಲ. ಈ ಬಾರಿ ಆಗುವ ಭರವಸೆಯಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>